Breaking News

ರಾಜ್ಯ ಸರ್ಕಾರದ ಕಾರ್ಯವೈಖರಿ ವಿರೋಧಿಸಿ ಸಂಸದ ಸಂಗಣ್ಣ ಕರಡಿ ಉಪವಾಸ ಸತ್ಯಾಗ್ರಹ

Spread the love

ಕೊಪ್ಪಳ : ರೈತರ ಕೃಷಿ ಪಂಪ್​ಸೆಟ್​ಗಳಿಗೆ ಪರಿವರ್ತಕ ಸಹಿತ ಉಚಿತ ಮೂಲಸೌಕರ್ಯ ಒದಗಿಸುವ ಯೋಜನೆ ರದ್ದುಪಡಿಸುವ ಆದೇಶ ಹಿಂಪಡೆಯಬೇಕು.

ರೈತರ ಪಂಪ್​ಸೆಟ್​ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆ ಮುಂದಿಟ್ಟುಕೊಂಡು ಕೊಪ್ಪಳ ಜಿಲ್ಲಾಡಳಿತ ಭವನದ ಮುಂದೆ ಸಂಸದ ಸಂಗಣ್ಣ ಕರಡಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ರೈತರು ಬದುಕೋದೆ ಕಷ್ಟವಾಗಿದೆ. ಅಂತಹದರಲ್ಲಿ ಸೆಪ್ಟೆಂಬರ್​​ 22ರಿಂದ ಬಂದ ರೈತರ ಅರ್ಜಿಗಳಿಗೆ ಪಂಪ್​ಸೆಟ್‌ ಸಲಕರಣೆ ಉಚಿತ ಕೊಡೋದಿಲ್ಲ ಅಂತ ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಬಗ್ಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೇಳಿದರೆ ನನ್ನ ಗಮನಕ್ಕೆ ಇಲ್ಲ ಎಂದು ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಈ ಆದೇಶವನ್ನು ಸರ್ಕಾರ ರದ್ದುಪಡಿಸಿ, ಹಿಂದಿನ ವ್ಯವಸ್ಥೆಯನ್ನು ಮುಂದುವರಿಸಬೇಕು. ಆದೇಶ ಮಾಡುವವರೆಗೂ ನನ್ನ ಉಪವಾಸ ಸತ್ಯಾಗ್ರಹ ಮುಂದುವರೆಯುತ್ತದೆ. ಹಗಲು ರಾತ್ರಿ ಉಪವಾಸ ಸತ್ಯಾಗ್ರಹ ಮುಂದುವರೆಸುತ್ತೇನೆ. ಆದೇಶ ರದ್ದುಪಡಿಸಿದರೆ ಮಾತ್ರ ಉಪವಾಸ ಸತ್ಯಾಗ್ರಹ ಕೈಬಿಡುತ್ತೇನೆ ಎಂದು ಅವರು ಹೇಳಿದರು.

ಇತ್ತೀಚಿಗೆ ಕೊಪ್ಪಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ವಿಚಾರಕ್ಕೆ ಪ್ರತ್ರಿಕ್ರಿಯಿಸಿ, ನಾನೊಬ್ಬ ಜನಪ್ರತಿನಿಧಿ, ಕೊಪ್ಪಳ ಜಿಲ್ಲೆಯಾಗಿ 26 ವರ್ಷವಾಗಿದೆ. ಕೊಪ್ಪಳದವರೊಬ್ಬರೂ ಮಂತ್ರಿಯಾಗುತ್ತಿಲ್ಲ. ಮಂತ್ರಿಯಾದರೆ ಕೊಪ್ಪಳ ಜಿಲ್ಲೆಯ ಅನೇಕ ಯೋಜನೆಗಳಿಗೆ ಚಾಲನೆ ಸಿಗುತ್ತಿದ್ದವು. ನ್ಯಾಯಾಲಯದ ಕಟ್ಟಡ ನಿರ್ಮಾಣ ವಿಚಾರದಲ್ಲಿ ನನಗೆ ಸಾಕಷ್ಟು ಮುಜುಗರವಾಗಿದೆ ಎಂದರು.

ಅಂದು ನಮ್ಮ ಸರ್ಕಾರವಿದ್ದರೂ ಹಣ ಕೊಡಲಿಲ್ಲ. ಆಗ ಮಾಜಿ ಸಚಿವರಾದ ಗೋವಿಂದ ಕಾರಜೋಳ, ಸಿ ಸಿ ಪಾಟೀಲ್‌ ಅವರನ್ನೂ ಭೇಟಿ ಮಾಡಿದ್ದೆ. ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಮಾಡುತ್ತೇನೆ ಎಂದಿದ್ದರು. ಆದರೆ ಆಗಲಿಲ್ಲ. ಕೊನೆಗೆ ವಕೀಲರು ಪಿಐಎಲ್ ಹಾಕಿ ಯೋಜನೆಗೆ ಹಣ ಪಡೆಯಬೇಕಾಯಿತು. ಹಾಗಿದ್ದಾಗ ಆ ಕಾರ್ಯಕ್ರಮದಲ್ಲಿ ನಾವು ಭಾಗವಹಿಸಿದಾಗ ಇದನ್ನಲ್ಲದೆ ಬೇರೆ ಏನು ಮಾತಾಡಲಿಕ್ಕೆ ಇರಲಿಲ್ಲ. ಹಾಗಾಗಿ ನಾನು ಅಸಮಾಧಾನ ವ್ಯಕ್ತಪಡಿಸಿದ್ದೇನೆ ಅಷ್ಟೇ ಎಂದರು. ಹಾಗಂತ ನಾನು ಪಕ್ಷ ವಿರೋಧಿಯಲ್ಲ. ಈಗಿರುವ ಕಾಂಗ್ರೆಸ್ ಸರ್ಕಾರದ ಹಣೆಬರಹವೂ ಅಷ್ಟೆ.
ಅಭಿವೃದ್ಧಿ ವಿಚಾರದಲ್ಲಿ ನಮಗೆ ಸೌಲಭ್ಯಗಳು ಬೇಡವಾ? ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ