Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಪೊಲೀಸರ ಸಮ್ಮುಖದಲ್ಲಿಯೇ ತಹಸೀಲ್ದಾರ್ ಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವುದು ಖಂಡನಾರ್ಹ.

ಪೊಲೀಸರ ಸಮ್ಮುಖದಲ್ಲಿಯೇ ತಹಸೀಲ್ದಾರ್ ಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವುದು ಖಂಡನಾರ್ಹ.

Spread the love

ಚಿಕ್ಕೋಡಿ : ಬಂಗಾರಪೇಟೆ ತಹಸೀಲ್ದಾರ್ ಬಿ.ಕೆ.ಚಂದ್ರಮೌಳೇಶ್ವರ ಹತ್ಯೆ ಹಿನ್ನೆಲೆ ಕಠಿಣ ಕಾನೂನು ರೂಪಿಸುವ ಮುಖಾಂತರ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ರಕ್ಷಣೆ ನೀಡುವಂತೆ ಒತ್ತಾಯಿಸಿ    ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಿಕ್ಕೋಡಿ ತಾಲೂಕಾ ಘಟಕದಿಂದ ಶುಕ್ರವಾರ ತಹಸೀಲ್ದಾರ ಎಸ್.ಎಸ್.ಸಂಪಗಾಂವಿ ಅವರಿಗೆ ಮನವಿ ಸಲ್ಲಿಸಿದರು.

ಸರ್ವೇ ಕಾರ್ಯದಲ್ಲಿ ನಿರತರಾಗಿದ್ದಾಗ ಪೊಲೀಸರ ಸಮ್ಮುಖದಲ್ಲಿಯೇ ತಹಸೀಲ್ದಾರ್ ಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವುದು ಖಂಡನಾರ್ಹ. ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಇಂತಹ ಘಟನೆಗಳು ಸಂಭವಿಸುತ್ತಿದ್ದು, ನೌಕರರು  ಭಯದ ವಾತಾವರಣದಲ್ಲಿಯೇ ಕರ್ತವ್ಯ ನಿರ್ವಹಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಕ್ಷಣೆ ನೀಡುವ ನಿಟ್ಟಿನಲ್ಲಿ ಕಠಿಣ ಕಾನೂನು ಜಾರಿಯಲ್ಲಿ ತರುವಂತೆ ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕಾ ಅಧ್ಯಕ್ಷ ಎಸ್.ಎ.ಮೆಳವಂಕಿ, ಎಸ್.ಎನ್.ಬೆಳಗಾವಿ, ಸಿ.ಎ.ಪಾಟೀಲ, ದತ್ತಾ ಎನ್.ಕಾಂಬಳೆ, ಎ.ಸಿ.ಮುಲ್ಲಾ, ಎಸ್.ಎ.ಖಡ್ಡ, ಜಿ.ಎಂ.ಕಾಂಬಳೆ,ಮಂಜುನಾಥ ಜನಮಟ್ಟಿ, ಎಂ.ಎ.ಬಿರಾದಾರ, ಪ್ರಮೋದ ಮಾನೆ, ಅರುಣ ಸಂಗ್ರೋಳಿ, ಎ.ಬಿ.ಸೊಲ್ಲಾಪೂರೆ, ಶಿವಾನಂದ ಶಿರಗಾಂವೆ, ಬಿ.ಎ.ಕುಂಬಾರ, ಬಿ.ಎಸ್.ಹಂಜಿ, ಪ್ರದೀಪ ಬೋವಿ, ಸಿ.ಎ.ವಂಟಗೂಡೆ, ಎ.ಪಿ.ಗೋಟೂರೆ, ಸಂಜು ಕುಂದರಗಿ, ಎಫ್.ಕೆ.ಸುಂದರವಾಲೆ, ಸಂಜು ಅರಕೇರಿ, ಜಿ.ಜಿ.ಹವಾಲ್ದಾರ, ಕೆ.ಕೆ.ವಾಡಪ್ಪಗೋಳ, ಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕುಗ ನೊಳಿ ಚೆಕ್ ಪೋಸ್ಟ್ ನಲ್ಲಿ 14ಲಕ್ಷ್ ರೂಪಾಯಿ ನಗ ದು ಪ ತ್ತೆ

Spread the loveಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ನಿಪ್ಪಾಣಿ ತಾಲೂಕಿನ ಕೊಗನೋಳ್ಳಿ ಚೆಕ್ ಪೋಸ್ಟನಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ದಿನದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ