Breaking News
Home / ರಾಜಕೀಯ / ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಯೂನಿವರ್ಸಿಟಿ ಬ್ಲೂ ಆಯ್ಕೆ ಪಾರದರ್ಶಕವಾಗಿಲ್ಲ:ತಮಗೆ ಅನ್ಯಾಯವಾಗಿದೆ ಎಂದು ನೊಂದ ಕ್ರೀಡಾಪಟು ಕಾಂತು

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಯೂನಿವರ್ಸಿಟಿ ಬ್ಲೂ ಆಯ್ಕೆ ಪಾರದರ್ಶಕವಾಗಿಲ್ಲ:ತಮಗೆ ಅನ್ಯಾಯವಾಗಿದೆ ಎಂದು ನೊಂದ ಕ್ರೀಡಾಪಟು ಕಾಂತು

Spread the love

ಬೆಳಗಾವಿ: ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಪ್ರಸಕ್ತ ಸಾಲಿನ ಪುರುಷರ ಕಬಡ್ಡಿ ತಂಡದ ಯೂನಿವರ್ಸಿಟಿ ಬ್ಲೂ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿಲ್ಲ.

ತಮಗೆ ಬೇಕಾದ ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗಿದೆ ಎಂದು ಕ್ರೀಡಾಪಟುವೊಬ್ಬರು ಆರೋಪಿಸಿದ್ದಾರೆ. ಕಬಡ್ಡಿ ಆಯ್ಕೆ ಪ್ರಕ್ರಿಯೆಯನ್ನು ಕಳೆದ ನ.1 ಮತ್ತು 2 ರಂದು ವಿಜಯಪುರದಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ತಮಗೆ ಅನ್ಯಾಯವಾಗಿದೆ ಎಂದು ನೊಂದ ಕ್ರೀಡಾಪಟು ಕಾಂತು ಕೂಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

, ”ನಾನು ಚೆನ್ನಾಗಿಯೇ ಆಡಿರುವೆ. ನನ್ನ ಆಟವನ್ನು ಪರಿಗಣಿಸದಯೇ ಅರ್ಹತೆ ಇಲ್ಲದವರನ್ನು ಆಯ್ಕೆ ಮಾಡಿದ್ದಾರೆ. ಕಾರಣ ‌ನೀಡದೇ ನನ್ನನ್ನು ಕೈಬಿಟ್ಟಿದ್ದಾರೆ. ಅಲ್ಲದೆ, ತಮಗೆ ಬೇಕಾದವರನ್ನು ಆಯ್ಕೆ ಮಾಡಿಕೊಂಡು ನನ್ನಂಥ ಅನೇಕ ಬಡ ಪ್ರತಿಭಾನ್ವಿತ ಆಟಗಾರರಿಗೆ ಅನ್ಯಾಯ ಎಸಗಿದ್ದಾರೆ. ಈ ಪ್ರಕ್ರಿಯೆ ರದ್ದುಪಡಿಸಿ, ಬೇರೆ ಆಯ್ಕೆ ಸಮಿತಿ ರಚನೆ ಮಾಡಿ ಮುಂದಿನ ಕಬಡ್ಡಿ ತಂಡದ ಆಯ್ಕೆ ಪ್ರಕ್ರಿಯೆಯನ್ನು ಚಿತ್ರೀಕರಣ ಸಹಿತವಾವಿ ಮತ್ತು ಪಾರದರ್ಶಕವಾಗಿ ನಡೆಸುವಂತೆ ಒತ್ತಾಯಿಸಿದರು.

 


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ