ಮಂಗಳೂರು: ಬ್ಯಾಂಕ್ನ ಹಿರಿಯ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಗುರುವಾರ ನಡೆದಿದೆ. ಬ್ಯಾಂಕ್ ಅಧಿಕಾರಿ ವಾದಿರಾಜ್(55) ಆತ್ಮಹತ್ಯೆ ಮಾಡಿಕೊಂಡವರು.
ವಾದಿರಾಜ್ ಅವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮನೆಯವರು ಬಂದು ನೋಡಿದಾಗ ಅವರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ಸಂಬಂಧಿಕರು ತಿಳಿಸಿದ್ದಾರೆ.
ವಾದಿರಾಜ್ ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದು, ಬೆಳಗ್ಗೆ ಮಕ್ಕಳು ಕಾಲೇಜಿಗೆ ತೆರಳಿದ್ದರು. ಪತ್ನಿ ಕೂಡಾ ಮನೆಯಲ್ಲಿ ಇಲ್ಲದ ವೇಳೆ ಅವರು ಈ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ. ಆದರೆ, ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.