Breaking News
Home / ರಾಜಕೀಯ / ಆಡಳಿತ ವೈಫಲ್ಯ ಖಂಡಿಸಿ ಸರ್ಕಾರದ ವಿರುದ್ಧ 3 ದಿನ ಧರಣಿ;B.S.Y.

ಆಡಳಿತ ವೈಫಲ್ಯ ಖಂಡಿಸಿ ಸರ್ಕಾರದ ವಿರುದ್ಧ 3 ದಿನ ಧರಣಿ;B.S.Y.

Spread the love

ಬೆಂಗಳೂರು: ಶಾಸಕ ಮುನಿರತ್ನ ವಿರುದ್ಧ ಕಾಂಗ್ರೆಸ್ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಖಂಡಿಸಿ ಹಾಗು ಸರ್ಕಾರದ ಆಡಳಿತ ವೈಫಲ್ಯ, ಭ್ರಷ್ಟಾಚಾರ ವಿರೋಧಿಸಿ ತಿಂಗಳಾಂತ್ಯಕ್ಕೆ ಮೂರು ದಿನ ಸರ್ಕಾರದ ವಿರುದ್ಧ ಧರಣಿ ನಡೆಸಲಿದ್ದು ಬೆಳಗಾವಿ ಅಧಿವೇಶನದಲ್ಲಿಯೂ ಈ ವಿಚಾರವನ್ನು ಇರಿಸಿಕೊಂಡು ಬಿಜೆಪಿ ಹೋರಾಟ ನಡೆಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದ್ದಾರೆ.

ಆರ್.ಆರ್. ನಗರದಲ್ಲಿ ಅರ್ಧಕ್ಕೆ ನಿಂತಿರುವ ಕಾಮಗಾರಿಗಳ ವೀಕ್ಷಣೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುನಿರತ್ನ ವಿರುದ್ಧ ಈ ರೀತಿಯ ಸೇಡಿನ ರಾಜಕಾರಣ ಸರಿಯಲ್ಲ. ಆಡಳಿತ ಪಕ್ಷ ನಮ್ಮ ಶಾಸಕ ಮುನಿರತ್ನ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿರುವುದನ್ನು ಖಂಡಿಸುತ್ತೇನೆ. ಅಭಿವೃದ್ಧಿ ಕಾರ್ಯಗಳಿಗೆ ಹಣ ಮಂಜೂರಾಗಿ ಅರ್ಧಂಬರ್ಧ ಕೆಲಸ ಆಗಿ ನಿಲ್ಲಿಸುವ ಮೂಲಕ ಒಂದು ರೀತಿಯ ಗೊಂದಲದ ವಾತಾವರಣ ನಿರ್ಮಾಣ ಮಾಡಿದೆ. ಈ ಭಾಗದ ಅಭಿವೃದ್ಧಿಗೆ ಸರ್ಕಾರ ಕೊಡಲಿ ಪೆಟ್ಟು ನೀಡಿದೆ ಎಂದು ಆರೋಪಿಸಿದರು.

ಕೇವಲ ಈ ಕ್ಷೇತ್ರ ಮಾತ್ರವಲ್ಲ, ಎಲ್ಲಾ ಕಡೆ ಗುತ್ತಿಗೆದಾರರು ಕೆಲಸ ಮಾಡಲು ಸಿದ್ಧರಿಲ್ಲ. ಸರ್ಕಾರ ಗುತ್ತಿಗೆದಾರರಿಗೆ ಹಣ ಕೊಡುತ್ತಿಲ್ಲ, ಏಳರಿಂದ ಎಂಟು ಪರ್ಸೆಂಟ್ ಕಮಿಷನ್ ಕೇಳುತ್ತಿದ್ದಾರೆ. ಹೀಗಾಗಿ ಯಾವುದೇ ಗುತ್ತಿಗೆದಾರರು ಕೆಲಸ ಮಾಡಲು ಮುಂದೆ ಬರುತ್ತಿಲ್ಲ. ಈ ರೀತಿಯ ವಾತಾವರಣ ಇಡೀ ರಾಜ್ಯದಲ್ಲಿ ಇದೆ. ಈ ಸರ್ಕಾರದ ಆಡಳಿತ ವೈಖರಿಯನ್ನು ಖಂಡಿಸುತ್ತೇನೆ. ಹಾಗಾಗಿ ಮೂರು ದಿನ ವಿಧಾನಸೌಧದ ಮುಂದೆ ಅಥವಾ ಫ್ರೀಡಂ ಪಾರ್ಕ್​ನಲ್ಲಿ ಸತ್ಯಾಗ್ರಹ ಮಾಡುತ್ತೇವೆ. ಸಾವಿರಾರು ಜನ ಸೇರಿ ಸರ್ಕಾರದ ನೀತಿಯ ವಿರುದ್ಧ ಪ್ರತಿಭಟನೆ ಮಾಡುತ್ತೇವೆ. ದಿನಾಂಕವನ್ನು ನಾಳೆ ನಿಗದಿ ಮಾಡುತ್ತೇವೆ ಎಂದು ತಿಳಿಸಿದರು.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ