Breaking News
Home / ರಾಜಕೀಯ / ಅಕಾಲಿಕ ಮಳೆಗೆ ಭತ್ತದ ಬೆಳೆ ಹಾನಿ ಅಂದಾಜು 70 ಕೋಟಿ ರೂ ಹಾನಿ

ಅಕಾಲಿಕ ಮಳೆಗೆ ಭತ್ತದ ಬೆಳೆ ಹಾನಿ ಅಂದಾಜು 70 ಕೋಟಿ ರೂ ಹಾನಿ

Spread the love

ಗಂಗಾವತಿ (ಕೊಪ್ಪಳ) : ಬುಧವಾರ ರಾತ್ರಿಯಿಂದ ಗುರುವಾರ ಬೆಳಗಿನ ಜಾವದವರೆಗೂ ಸುರಿದ ಅಕಾಲಿಕ ಮಳೆ ಹಾಗೂ ಬೀಸಿದ ಭಾರಿ ಗಾಳಿಗೆ ಗಂಗಾವತಿ ಮತ್ತು ಕಾರಟಗಿ ತಾಲೂಕಿನಲ್ಲಿ 3500ಕ್ಕೂ ಅಧಿಕ ಹೆಕ್ಟೇರ್​ ಪ್ರದೇಶದಲ್ಲಿ ಬೆಳೆದಿದ್ದ ಭತ್ತದ ಬೆಳೆ ಹಾನಿಯಾಗಿದೆ.

 

ಕೊಯ್ಲಿನ ಹಂತಕ್ಕೆ ಬಂದಿದ್ದ ಸೋನಾಮಸೂರಿ ತಳಿಯ ಭತ್ತದ ಬೆಳೆ ಹೆಚ್ಚಿನ ಹಾನಿಯಾಗಿದೆ. ಕಾರಟಗಿ ತಾಲೂಕು ಒಂದರಲ್ಲಿಯೇ ಅತಿಹೆಚ್ಚು ಹಾನಿಯಾಗಿದ್ದು, ಸುಮಾರು ಮೂರು ಸಾವಿರ ಹೆಕ್ಟೇರ್​ ಪ್ರದೇಶದಲ್ಲಿ ಭತ್ತ ಹಾನಿಯಾಗಿದೆ. ಗಂಗಾವತಿ ತಾಲೂಕಿನಲ್ಲಿ ಸುಮಾರು ಐದು ನೂರು ಹೆಕ್ಟೇರ್​ ಪ್ರದೇಶದಲ್ಲಿನ ಭತ್ತ ಹಾನಿಯಾಗಿದೆ.

ಕಾರಟಗಿ-ಸಿದ್ದಾಪುರ ಹೋಬಳಿಯ ಬೂದಗುಂಪಾ, ಯರೋಡಣಾ, ಈಳಿಗೆನೂರು, ಮಲರ್​ನಹಳ್ಳಿ, ಗಂಗಾವತಿ-ಮರಳಿ ಹೋಬಳಿಯ ಹೊಸಳ್ಳಿ, ಹಣವಾಳ, ಹೊಸಕೇರಿ, ಶ್ರೀರಾಮನಗರ, ಮರಳಿ, ನರಸಾಪುರ ಮೊದಲಾದ ಗ್ರಾಮಗಳಲ್ಲಿನ ಭತ್ತ ಹಾನಿಯಾಗಿದೆ ಎಂಬುದಾಗಿ ತಿಳಿದುಬಂದಿದೆ. ಭತ್ತದ ಹಾನಿ ಮಾಹಿತಿ ಲಭಿಸುತ್ತಿದ್ದಂತೆಯೆ ಅಧಿಕಾರಿಗಳು ಸಮೀಕ್ಷೆಗೆ ಇಳಿದಿದ್ದಾರೆ.

 


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ