Breaking News

ಕೆಇಎ ಪರೀಕ್ಷಾ ಹಗರಣದ ಪ್ರಮುಖ ಆರೋಪಿ ಆರ್‌ಡಿ ಪಾಟೀಲ್​​ನ​ನ್ನು ಕಲಬುರಗಿ ಜಿಲ್ಲೆಯ ವಿಶೇಷ ಪೊಲೀಸ್ ತಂಡ ಮಹಾರಾಷ್ಟ್ರ ಗಡಿಯಲ್ಲಿ ಬಂಧಿಸಿದ್ದಾರೆ.

Spread the love

ಕಲಬುರಗಿ: ಕೆಇಎ ನಡೆಸಿರೋ ಎಫ್‌ಡಿಎ ಪರೀಕ್ಷೆಯಲ್ಲಿ ಅಕ್ರಮ ಎಸೆಗಿರುವ ಆರೋಪ ಎದುರಿಸುತ್ತಿರುವ ಪ್ರಕರಣದ ಕಿಂಗ್‌ಪಿನ್ ಆರ್‌ಡಿ ಪಾಟೀಲ್​ನ್ನು ಕೊನೆಗೂ ಬಂಧನ ಮಾಡಲಾಗಿದೆ.

ಮಹಾರಾಷ್ಟ್ರ ಗಡಿಯಲ್ಲಿ ಕಲಬುರಗಿ ಜಿಲ್ಲೆಯ ವಿಶೇಷ ಪೊಲೀಸ್ ತಂಡದಿಂದ ಕಿಂಗ್‌ಪಿನ್ ಆರ್‌ಡಿ ಪಾಟೀಲ್ ನನ್ನು ಅರೆಸ್ಟ್​ ಮಾಡಲಾಗಿದೆ. ಆರ್‌ಡಿಪಿಯನ್ನು ಬಂಧಿಸಿದ್ದು, ಕಲಬುರಗಿಗೆ ಕರೆತರುವ ಸಾಧ್ಯತೆ ಇದೆ.

ಕಳೆದ 12 ದಿನಗಳಿಂದ ತಲೆಮರೆಸಿಕೊಂಡಿದ್ದ ಕೆಇಎ ಪರೀಕ್ಷಾ ಹಗರಣದ ಪ್ರಮುಖ ಆರೋಪಿ ಆರ್‌ಡಿ ಪಾಟೀಲ್, ನವೆಂಬರ್​ 6 ರಂದು ಕಲಬುರಗಿ ನಗರದ ವರ್ಧಾ ಲೇಔಟ್‌ನ ಮಹಾಲಕ್ಷ್ಮಿ ಅಪಾರ್ಟ್ಮೆಂಟ್‌ ಹಿಂಭಾಗದ ಕಾಂಪೌಂಡ್ ಹಾರಿ ಎಸ್ಕೆಪ್ ಆಗಿದ್ದ. ಈ ಕಿಂಗ್‌ಪಿನ್ ಬಂಧನಕ್ಕಾಗಿಯೇ ನಾಲ್ವರು ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಬಂಧನದ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.


Spread the love

About Laxminews 24x7

Check Also

ಬಿಎಂಐಸಿ ಯೋಜನೆಯನ್ನು ಮರುಪರಿಶೀಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

Spread the loveಬೆಂಗಳೂರು: ಕಳೆದ 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್‌ ಮಾತ್ರ ನಿರ್ಮಾಣಗೊಂಡಿರುವ ಬೆಂಗಳೂರು ಮೈಸೂರು ಮೂಲ ಸೌಕರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ