Breaking News

ಬಿಡದಿಗೆ ‘ನಮ್ಮ ಮೆಟ್ರೋ’ : ಡಿಸಿಎಂ ಡಿಕೆ ಶಿವಕುಮಾರ್​ ಘೋಷಣೆ

Spread the love

ರಾಮನಗರ: ಬಿಡದಿಯು ಕೈಗಾರಿಕಾ ಪ್ರದೇಶವಾಗಿದ್ದು, ಇಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನ ಉದ್ಯೋಗ ಮಾಡುತ್ತಿದ್ದಾರೆ. ಅವರ ಓಡಾಟಕ್ಕೆ ಅನುಕೂಲವಾಗಲಿ ಎಂಬ ದೃಷ್ಠಿಯಿಂದ ಬಿಡದಿಗೆ ನಮ್ಮ ಮೆಟ್ರೋ ಘೋಷಣೆ ಮಾಡಲಾಗಿದೆ. ಹಾಗೆಯೇ ಇನ್ನು ಮುಂದೆ ಬಿಡದಿ ಪ್ರಾಧಿಕಾರ ಹೆಸರಿಗೆ ಬದಲಾಗಿ ಗ್ರೇಟರ್ ಬೆಂಗಳೂರು ಎಂಬ ಹೊಸ ನಾಮಕರಣ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮಾತನಾಡಿದ ಅವರು, ಬಿಡದಿಯಲ್ಲಿ ನಮ್ಮ ಮೆಟ್ರೋ ಮಾಡುವ ಬಗ್ಗೆ ಇಲ್ಲಿನ ಎಂಎಲ್‌ಎ ಹಾಗೂ ಎಂಪಿಗಳು ಮನವಿ‌ ಮಾಡಿದ್ದರು. ಈ ಬಗ್ಗೆ ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಡಿಪಿಆರ್ ಮಾಡಲು ಸೂಚಿಸಿದ್ದೇನೆ. ಹಿಂದೆ ಬಿಡದಿ ಸ್ಮಾರ್ಟ್ ಸಿಟಿಗಾಗಿ ಹತ್ತು ಸಾವಿರ ಎಕರೆ ಜಾಗ ವಶ ಪಡಿಸಿಕೊಳ್ಳಲಾಗಿತ್ತು. ಆದರೆ ಅದು ಹಾಗೆಯೆ ಉಳಿದುಕೊಂಡಿದೆ.

ಹೀಗಾಗಿ ಗ್ರೇಟರ್ ಬೆಂಗಳೂರು ಡೆವಲಪ್ಮೆಂಟ್ ಪ್ಲ್ಯಾನಿಂಗ್​ಗೆ ಬಿಡದಿ ಘೋಷಿಸಲಾಗಿದೆ. ಮುಂದೆ ಲೀಗಲ್ ಪ್ರೊಸಿಜರ್ ಆಗಲಿದೆ. ಎಲ್ಲರಿಗೂ ಶಕ್ತಿ ತುಂಬುವ ದೃಷ್ಟಿಯಿಂದ ಈ ಘೋಷಣೆಗಳನ್ನು ಮಾಡಲಾಗುತ್ತಿದೆ. ಈ ನಿಟ್ಟಿನಿಂದ ಸ್ಥಳೀಯರಿಗೆ ಉದ್ಯೋಗಕ್ಕಾಗಿ ಪ್ರತ್ಯೇಕ ಸಭೆ ನಡೆಸಿ, ಎಲ್ಲ ಕಾರ್ಖಾನೆಗಳ ಬಳಿ ಮನವಿ ಮಾಡಲಾಗುವುದು ಎಂದು ಸ್ಪಷ್ಟನೆ ನೀಡಿದ್ದಾರೆ.

ಹಾಗೆಯೇ ರಾಮನಗರಕ್ಕೆ ಮರುನಾಮಕರಣ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ನಾವೆಲ್ಲ ಬೆಂಗಳೂರಿನವರು. ನಮ್ಮ ಮೂಲ ಹೆಸರನ್ನು ನಾವು ಕೆಳದುಕೊಳ್ಳುವುದಿಲ್ಲ. ಹೀಗಾಗಿ ಬೆಂಗಳೂರು ದಕ್ಷಿಣವನ್ನಾಗಿ ಜಿಲ್ಲೆಯ ಹೆಸರು ಬದಲಿಸುವ ಬಗ್ಗೆ ಜನರಿಂದ ಅಭಿಪ್ರಾಯ ಕೇಳಲಾಗುತ್ತಿದೆ. ಬಳಿಕ ಸರ್ಕಾರದ ಮುಂದಿಟ್ಟು ಬದಲಾವಣೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ