Breaking News

ಅತ್ಯಾಚಾರ ಎಸಗಿ, ಕೊಲೆದೇಹವನ್ನು ಕಾಡಿನಲ್ಲಿ ಎಸೆದು ಪರಾರಿ

Spread the love

ಹಾವೇರಿ: ಮಹಿಳೆಯನ್ನು ಬೈಕ್‍ನಲ್ಲಿ ಕರೆ ತಂದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿ, ಕಾಡಿನಲ್ಲಿ ಎಸೆದು ಹೋಗಿರುವ ಅಮಾನವೀಯ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಜಿಲ್ಲೆಯ ಹಾನಗಲ್ ತಾಲೂಕಿನ ಮಕರವಳ್ಳಿ ಅರಣ್ಯ ಪ್ರದೇಶದಲ್ಲಿ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮಹಿಳೆಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ವಿಚಾರಣೆ ನಡೆಸಲಾಗಿದ್ದು, ಈ ವೇಳೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚಿರಡೋಣಿ ಗ್ರಾಮದ 48 ವರ್ಷದ ಈರಮ್ಮಳನ್ನು ಅದೇ ಗ್ರಾಮದ 26 ವರ್ಷದ ಯಲ್ಲಪ್ಪ ಕೊಲೆ ಮಾಡಿದ್ದಾನೆ.

ಮಹಿಳೆಯನ್ನ ಹತ್ಯೆ ಮಾಡಿ ಮೃತದೇಹವನ್ನ ಅರಣ್ಯ ಪ್ರದೇಶದಲ್ಲಿ ಎಸೆದು ಯುವಕ ಪರಾರಿಯಾಗಿದ್ದ. ಕೊಳೆತ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ