Breaking News

ದೇಶದ ಪಟಾಕಿ ಕೇಂದ್ರ ‘ಶಿವಕಾಶಿ’ಗೆ 50 ಕೋಟಿ ರೂಪಾಯಿ ವ್ಯವಹಾರ ನಷ್ಟ: ವರದಿ

Spread the love

ವಿರುದುನಗರ (ತಮಿಳುನಾಡು): ಪಟಾಕಿ ತಯಾರಿಕೆಗೆ ಹೆಸರುವಾಸಿಯಾದ ತಮಿಳುನಾಡಿನ ಶಿವಕಾಶಿ ಈ ಬಾರಿ ಭಾರಿ ವ್ಯವಹಾರ ನಷ್ಟ ಅನುಭವಿಸಿದೆ ಎಂದು ವರದಿಯಾಗಿದೆ.

ಬೆಳಕಿನ ಹಬ್ಬ ದೀಪಾವಳಿಗೆ 6 ಸಾವಿರ ಕೋಟಿಯಷ್ಟು ಪಟಾಕಿ ಮಾರಾಟವಾಗಿದ್ದರೂ, ಇದು ಕಳೆದ ಬಾರಿಗಿಂತ ಅರ್ಧಕ್ಕಿಂತಲೂ ಕಡಿಮೆಯಾಗಿದೆ.

ತಮಿಳುನಾಡಿನ ವಿರುದುನಗರ ಜಿಲ್ಲೆಯ ಶಿವಕಾಶಿ ಇಡೀ ದೇಶಕ್ಕೆ ಪಟಾಕಿ ಸರಬರಾಜು ಮಾಡುವ ಮುಖ್ಯ ಕೇಂದ್ರವಾಗಿದೆ. ಇಲ್ಲಿನ ಪಟಾಕಿಗಳಿಗೆ ಹೆಚ್ಚಿನ ಬೇಡಿಕೆಯಿದೆ. ಹೀಗಾಗಿ ಪ್ರಮುಖ ವ್ಯವಹಾರ ಕೇಂದ್ರವೂ ಆಗಿರುವ ಶಿವಕಾಶಿ ಈ ಬಾರಿಯ ಕಟ್ಟುನಿಟ್ಟಿನ ನಿಯಮಗಳು ಮತ್ತು ಅನಾಹುತಗಳಿಂದಾಗಿ ಭಾರೀ ನಷ್ಟಕ್ಕೀಡಾಗಿದೆ.

ದೇಶಾದ್ಯಂತ 6 ಸಾವಿರ ಕೋಟಿ ರೂಪಾಯಿ ಮೌಲ್ಯದ ಪಟಾಕಿಗಳು ಮಾರಾಟವಾಗಿವೆ ಎಂದು ಪಟಾಕಿ ತಯಾರಕರು ತಿಳಿಸಿದ್ದಾರೆ. 2022 ಕ್ಕೆ ಹೋಲಿಸಿದರೆ ಈ ವರ್ಷ ವ್ಯವಹಾರವು 50 ಕೋಟಿ ರೂಪಾಯಿಗಳಷ್ಟು ಕುಸಿತ ಕಂಡಿದೆ. ಜೊತೆಗೆ ಪಟಾಕಿ ತಯಾರಿಕೆಯಲ್ಲೂ ಶೇಕಡಾ 10 ರಷ್ಟು ಇಳಿಕೆ ಕಂಡಿದೆ. ನಿರಂತರ ಮಳೆ, ಪಟಾಕಿ ಕೇಂದ್ರಗಳಲ್ಲಾದ ಅವಘಡಗಳು, ಜೀವಹಾನಿಯಿಂದಾಗಿ ಉತ್ಪಾದನೆ ಮೇಲೆ ಪೆಟ್ಟು ಬಿದ್ದಿದೆ ಎಂದು ತಿಳಿಸಿದರು.

ಸರ್ಕಾರಗಳು ಪಟಾಕಿ ಉತ್ಪಾದನೆ ಮೇಲೆ ಹೇರಿದ ಕಟ್ಟುನಿಟ್ಟಿನ ನಿಯಮಗಳು ಕೂಡ ‘ಶಿವಕಾಶಿ’ ಮೇಲೆ ಪರಿಣಾಮ ಬೀರಿವೆ. ಆದಾಗ್ಯೂ ದೀಪಾವಳಿ ಹಬ್ಬಕ್ಕೆ 6 ಸಾವಿರ ಕೋಟಿ ರೂಪಾಯಿ ಮೌಲ್ಯದಷ್ಟು ಪಟಾಕಿಗಳನ್ನು ದೇಶದ ಉದ್ದಗಲಕ್ಕೂ ಸರಬರಾಜು ಮಾಡಲಾಗಿದೆ ಎಂದು ತಿಳಿಸಿದರು.

50 ಕೋಟಿ ರೂಪಾಯಿ ನಷ್ಟ: ತಮಿಳುನಾಡಿನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಪಟಾಕಿ ತಯಾರಿಕೆಗೆ ಪರವಾನಗಿ ನೀಡಲು ಸರ್ಕಾರ ವಿಳಂಬ ಮಾಡಿತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ರಾಜ್ಯದಲ್ಲಿ ಪಟಾಕಿ ಮಾರಾಟದಲ್ಲಿ 50 ಕೋಟಿ ರೂ.ನಷ್ಟು ನಷ್ಟವಾಗಿದೆ. ಆದಾಗ್ಯೂ, ದೇಶಾದ್ಯಂತ ಮಾರಾಟಕ್ಕೆ ಕಳುಹಿಸಲಾದ ಪಟಾಕಿಗಳಲ್ಲಿ ಶೇಕಡಾ 95 ರಷ್ಟು ಮಾರಾಟ ಕಂಡಿದೆ ಎಂದು ವರದಿಯಾಗಿದೆ.

ಈ ಬಾರಿ ದೇಶಾದ್ಯಂತ ದೀಪಾವಳಿ ಹಬ್ಬಕ್ಕೆ ಕಳುಹಿಸಿದ ಪಟಾಕಿಗಳ ಮಾರಾಟ ಹಾಗೂ ಬಂದ ಮೊತ್ತವನ್ನು ಮುಂದಿನ ದಿನಗಳಲ್ಲಿ ಪರಿಸ್ಥಿತಿಗಳಿಗೆ ಅನುಗುಣವಾಗಿ ಪಟಾಕಿ ಉತ್ಪಾದನೆ ಮಾಡುವುದಾಗಿ ಅಲ್ಲಿ ವ್ಯಾಪಾರಿಯೊಬ್ಬರು ತಿಳಿಸಿದರು.


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ