Breaking News
Home / ರಾಜಕೀಯ / ಪೋಷಕರ ಬುದ್ಧಿವಾದಕ್ಕೆ ಮನನೊಂದು 14 ವರ್ಷದ ಬಾಲಕ ಆತ್ಮಹತ್ಯೆ

ಪೋಷಕರ ಬುದ್ಧಿವಾದಕ್ಕೆ ಮನನೊಂದು 14 ವರ್ಷದ ಬಾಲಕ ಆತ್ಮಹತ್ಯೆ

Spread the love

ಬೆಳಗಾವಿ: ದೀಪಾವಳಿ ಹಬ್ಬದ ರಜೆ ಇದೆ ಎಂದು ಸುಮ್ಮನೆ ಹೊರಗಡೆ ತಿರುಗಾಡಬೇಡ, ಓದಿನ ಕಡೆಯೂ ಗಮನ ಹರಿಸುವಂತೆ ಪೋಷಕರು ಬುದ್ಧಿವಾದ ಹೇಳಿದ್ದನ್ನೇ ಮನಸ್ಸಿಗೆ ಹಚ್ಚಿಕೊಂಡು ಮಗ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದದಲ್ಲಿ ಸೋಮವಾರ ನಡೆದಿದೆ.

ತಮ್ಮ ಮನೆಯ ಮಹಡಿಯ ಮೇಲಿನ ರೂಮಿನಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ಬಾಲಕ ಮೂಡಲಗಿಯ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ. ಇನ್ನು ಒಂದು ದಿನದಲ್ಲಿ ಶಾಲೆ ಪ್ರಾರಂಭವಾಗುತ್ತದೆ. ಸರಿಯಾಗಿ ಓದಿಕೊ ಎಂದು ಪೋಷಕರು ಬುದ್ಧಿವಾದ ಹೇಳಿದ ಬಳಿಕ ಬಾಲಕ ಪ್ರಾಣ ಕಳೆದುಕೊಂಡಿದ್ದಾನೆ. ಮಗನ ಸಾವಿನಿಂದ ಪೋಷಕರು ದಿಗ್ಭ್ರಾಂತರಾಗಿದ್ದಾರೆ. ಮಗನಿಗೆ ಬುದ್ಧಿವಾದ ಹೇಳಿದ್ದೆ ತಪ್ಪಾಯಿತೆ ಎಂದು ಗೋಳಾಡುತ್ತಿದ್ದಾರೆ. ಈ ಸಂಬಂಧ ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ