ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಅಪೌಷ್ಠಿಕತೆಯನ್ನು ನಿವಾರಿಸೋ ನಿಟ್ಟಿನಲ್ಲಿ ಶೀಘ್ರವೇ ಪೌಷ್ಠಿಕಾಂಶ ಯುಕ್ತ ಆಹಾರ ನೀಡೋದಾಗಿ ಸರ್ಕಾರ ಹೇಳಿತ್ತು. ಅದರ ಭಾಗವಾಗಿ ಡಿಸೆಂಬರ್ ನಿಂದ ಒಂದು ಲೋಟ ರಾಗಿ ಮಾಲ್ಟ್ ವಿತರಿಸೋದಕ್ಕೆ ನಿರ್ಧರಿಸಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡೀದಂತ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಅವರು, ರಾಜ್ಯದ ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆಗೆ ವಾರದಲ್ಲಿ 2 ದಿನ ಮೊಟ್ಟ, ಚಿಕ್ಕಿ-ಬಾಳೆಹಣ್ಣು ನೀಡಲಾಗುತ್ತಿದೆ.
ಇದಲ್ಲದೇ ಡಿಸೆಂಬರ್ ನಿಂದ ಒಂದು ಲೋಟ ರಾಗಿ ಮಾಲ್ಟ್ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.