Breaking News

ಈ ಸಾರಿ ವರ್ಲ್ಡ್​ ಕಪ್​ ನಮ್ದೇ’: ರಜಿನಿಕಾಂತ್​ ವಿಶ್ವಾಸ

Spread the love

ಅಹಮದಾಬಾದ್(ಗುಜರಾತ್)​: ತಮಿಳು ಸೂಪರ್ ​ ಸ್ಟಾರ್ ರಜಿನಿಕಾಂತ್ ಅವರು ಕ್ರಿಕೆಟ್​ನ ಕಟ್ಟಾ ಅಭಿಮಾನಿ.

ತಮ್ಮ ನೆಚ್ಚಿನ ಕ್ರಿಕೆಟಿಗರ ಬಗ್ಗೆಯೂ ಆಗಾಗ ಅವರು ಮಾತನಾಡುತ್ತಾರೆ. ಇತ್ತೀಚೆಗೆ ನಡೆದ ಭಾರತ-ನ್ಯೂಜಿಲೆಂಡ್ ಸೆಮಿ ಫೈನಲ್ ಪಂದ್ಯಕ್ಕೆ ಕುಟುಂಬಸಮೇತರಾಗಿ ಆಗಮಿಸಿ ಸಂಭ್ರಮಿಸಿದ್ದರು. ಮುಂಬೈನಿಂದ ಚೆನ್ನೈಗೆ ಮರಳಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶ್ವಕಪ್ ಫೈನಲ್​ ಕುರಿತು ಆಸಕ್ತಿದಾಯಕ ವಿಷಯಗಳನ್ನು ಹಂಚಿಕೊಂಡರು.

ರಜಿನಿಕಾಂತ್​ ನ್ಯೂಜಿಲೆಂಡ್ ವಿರುದ್ಧದ ಪಂದ್ಯದ ಕುರಿತು ಮಾತನಾಡುತ್ತಾ, ನಾವು ಮೊದಲು ಸ್ವಲ್ಪ ಹೊತ್ತು ಟೆನ್ಷನ್ ಆಗಿದ್ದೆವು. ಪ್ರತಿ ವಿಕೆಟ್ ಬೀಳುತ್ತಿದ್ದಂತೆ ಪರಿಸ್ಥಿತಿ ನಮ್ಮ ಪರವಾಗಿ ಬದಲಾಯಿತು. ಆದರೆ, ಮೊದಲ ಒಂದೂವರೆ ಗಂಟೆಗಳ ಕಾಲ ನಾವು ತುಂಬಾ ಚಿಂತಿತರಾಗಿದ್ದೆವು. ಈ ಬಾರಿಯ ವಿಶ್ವಕಪ್ ನಮ್ದೇ. ಶೇ.100ರಷ್ಟು ವಿಶ್ವಕಪ್​ ಭಾರತಕ್ಕೆ ಬರಲಿದೆ ಎಂದರು. ವಿಶ್ವಕಪ್‌ನ ಸೆಮಿ ಫೈನಲ್‌ನಲ್ಲಿ ಉತ್ತಮ ಬೌಲಿಂಗ್ ಮಾಡಿದ್ದ ಮೊಹಮ್ಮದ್ ಶಮಿ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ, ಸೆಮಿ ಫೈನಲ್‌ನಲ್ಲಿ ಭಾರತ ತಂಡದ ಗೆಲುವಿಗೆ ನೂರಕ್ಕೆ ನೂರು ಅವರೇ ಕಾರಣ ಎಂದು ಉತ್ತರಿಸಿದರು.

ಅಲ್ಲದೇ, ಸೆಮಿ ಫೈನಲ್​ನಲ್ಲಿ ದಾಖಲೆ ಸೃಷ್ಟಿಸಿದ ಕೊಹ್ಲಿ ಹಾಗೂ ಶಮಿಗೆ ರಜಿನಿ ಅಭಿನಂದನೆ ಸಲ್ಲಿಸಿದ್ದಾರೆ. ಸ್ಪಿನ್ನರ್ ಅಶ್ವಿನ್ ಜೊತೆಗಿನ ಅವರ ಇತ್ತೀಚಿನ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಫೈನಲ್​ ಪಂದ್ಯ ಭಾನುವಾರ ಆಸ್ಟ್ರೇಲಿಯಾ ಮತ್ತು ಭಾರತ ಮಧ್ಯೆ ನಡೆಯಲಿದೆ. ಎರಡು ದಶಕಗಳ ನಂತರ ಮತ್ತೊಮ್ಮೆ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗುತ್ತಿದೆ. ಗುರುವಾರ ನಡೆದ ರೋಚಕ ಸೆಮಿಫೈನಲ್ ಪಂದ್ಯದಲ್ಲಿ ಆಸೀಸ್ 3 ವಿಕೆಟ್​ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಟೀಂ ಇಂಡಿಯಾ ಜೊತೆ ಪ್ರಶಸ್ತಿ ಹೋರಾಟಕ್ಕೆ ಸಜ್ಜಾಗಿದೆ. ಬೌಂಡರಿ ಮತ್ತು ರನ್‌ಗಳ ಕೊರತೆಯಿಂದ ಕಡಿಮೆ ಸ್ಕೋರ್‌ ಮಧ್ಯೆಯೂ ಸೆಮಿಸ್ ಪಂದ್ಯ ರೋಚಕವಾಗಿ ಸಾಗಿತು. ಮೊದಲಿಗೆ ಸ್ಟಾರ್ಕ್, ಹೇಜಲ್‌ವುಡ್ ಹಾಗೂ ಹೆಡ್​ನಿಂದಾಗಿ ಕುಸಿಯುವ ಭೀತಿಯಲ್ಲಿದ್ದ ದಕ್ಷಿಣ ಆಫ್ರಿಕಾ, ಮಿಲ್ಲರ್ (101) ಅದ್ಭುತ ಹೋರಾಟದಿಂದ 212 ರನ್ ಗಳಿಸಲಷ್ಟೇ ಶಕ್ತವಾಯಿತು. ಅಲ್ಪ ವಿರಾಮದಲ್ಲಿ ಆಸೀಸ್ ಗೊಂದಲದಲ್ಲಿ ಸಿಲುಕಲಿಲ್ಲ. ಗುರಿ ಬೆನ್ನತ್ತಿದ ತಂಡ 47.2 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು ಗೆಲುವಿನ ನಗೆ ಬೀರಿತು. ಹೆಡ್ (62) ನಿರ್ಣಾಯಕ ಇನಿಂಗ್ಸ್ ಆಡಿದರು. ಬೌಲಿಂಗ್​ನಲ್ಲಿ ದಕ್ಷಿಣ ಆಫ್ರಿಕಾ ತೀವ್ರ ಹೋರಾಟ ನಡೆಸಿದರೂ ಸ್ಕೋರ್ ಕಡಿಮೆ ಇದ್ದ ಕಾರಣ ಅದೃಷ್ಟ ಕೈಹಿಡಿಯಲಿಲ್ಲ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ