ಬೆಂಗಳೂರು: “ಜಮೀರ್ ಅಹಮದ್ ಯಾವುದೋ ಒಂದು ಸಮುದಾಯದ ಜವಾಬ್ದಾರಿ ತಗೊಂಡಿಲ್ಲ.
ನೀವು ನಿಮ್ಮ ಅಂತರಾಳದ ಮಾತು ಆಡಿದ್ದೀರಿ. ಈ ಹೇಳಿಕೆ ನಿಜಕ್ಕೂ ದುರದೃಷ್ಟಕರ. ಇನ್ನು ಮುಂದೆ ಈ ರೀತಿ ಮಾತಾಡದಂತೆ ಎಚ್ಚರಿಕೆ ವಹಿಸಿ” ಎಂದು ಸಚಿವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಲಹೆ ನೀಡಿದರು.
ಜಮೀರ್ ಅಹಮ್ಮದ್ ಅವರು ತೆಲಂಗಾಣ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಕುರಿತು ಶಿವಾನಂದ ವೃತ್ತದಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ಶುಕ್ರವಾರ ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, “ಜಮೀರ್ ಅಹಮದ್ ಅವರ ಬಾಯಲ್ಲಿ ಇಂಥ ಮಾತು ದುರದೃಷ್ಟಕರ ಹಾಗೂ ಖಂಡನೀಯ. ಸಭಾಧ್ಯಕ್ಷರ ಪೀಠಕ್ಕೆ ಶಾಸಕರು ಗೌರವ ಕೊಡುವುದೇ ವಿನಃ ಯಾವುದೋ ವ್ಯಕ್ತಿಗಲ್ಲ. ಇನ್ಮುಂದಾದರೂ ಈ ರೀತಿ ಮಾತಾಡುವಾಗ ಎಚ್ಚರಿಕೆ ಇರಲಿ” ಎಂದರು.