Breaking News

ಅಭಿಮಾನಿಗಳು, ಕಾರ್ಯಕರ್ತರು ನನ್ನ ಮೇಲೆ ವಿಶೇಷ ಪ್ರೀತಿ, ಗೌರವ ಇಟ್ಟಿದ್ದಾರೆ. ನನ್ನ ಕೊನೆ ಉಸಿರಿನವರೆಗೂ ಅವರಿಗಾಗಿ ಹೋರಾಟ ಮಾಡ್ತೀನಿ:ನಿಖಿಲ್ ಕುಮಾರಸ್ವಾಮಿ

Spread the love

ಮಂಡ್ಯ: ಅಭಿಮಾನಿಗಳು, ಕಾರ್ಯಕರ್ತರು ನನ್ನ ಮೇಲೆ ವಿಶೇಷ ಪ್ರೀತಿ, ಗೌರವ ಇಟ್ಟಿದ್ದಾರೆ. ನನ್ನ ಕೊನೆ ಉಸಿರಿನವರೆಗೂ ಅವರಿಗಾಗಿ ಹೋರಾಟ ಮಾಡ್ತೀನಿ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಇಂದು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಚೌಡೇನಹಳ್ಳಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಭೇಟಿ ನೀಡಿದ ನಿಖಿಲ್ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದರು. ಮತ್ತೊಮ್ಮೆ ರೈತರ ಆತ್ಮಹತ್ಯೆ ದಿನನಿತ್ಯ ನಡೆಯುತ್ತಿದೆ. ಇದು ನಿಲ್ಲಬೇಕು ಎಂದು ಹೇಳಿದರು.

ಇಂದು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಚೌಡೇನಹಳ್ಳಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಭೇಟಿ ನೀಡಿದ ನಿಖಿಲ್ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದರು. ಮತ್ತೊಮ್ಮೆ ರೈತರ ಆತ್ಮಹತ್ಯೆ ದಿನನಿತ್ಯ ನಡೆಯುತ್ತಿದೆ. ಇದು ನಿಲ್ಲಬೇಕು ಎಂದು ಹೇಳಿದರು.

ನಂಜೇಗೌಡರು ಸಾಲದ ಹೊರೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಡ್ಡಿ ಕಟ್ಟಲಾಗದೆ, ಬೆಳೆಗೆ ಸರಿಯಾದ ಬೆಲೆ ಸಿಗದೇ ಇವತ್ತು ಆತ್ಮಹತ್ಯೆ ದಾರಿ ಹಿಡಿದಿದ್ದಾರೆ. ಮುಂದಿನ ದಿನಗಳಲ್ಲಿ ರೈತರು ಸಾಲ ಮಾಡದ ರೀತಿ ಕಾರ್ಯಕ್ರಮ ಮಾಡೋದು ಕುಮಾರಣ್ಣನ ಕನಸಾಗಿತ್ತು. ಸಾಂತ್ವನ ಹೇಳಿ ನಾವು ಹೋಗಬಹುದು, ಆದರೆ ಸರ್ಕಾರ ರೈತರ ಆತ್ಮಹತ್ಯೆ ನಿಲ್ಲಿಸುವ ರೀತಿಯಲ್ಲಿ ಕೆಲಸ ಮಾಡಬೇಕು ಎಂದರು.

ಇದೇ ವೇಳೆ ರೈತನ ಮನೆಗೆ ಸಚಿವರು ಬಂದು ಹೋದ ವಿಚಾರವಾಗಿ ಮಾತನಾಡಿದ ನಿಖಿಲ್ ಅವರು, ನಾನು ಬರುತ್ತೇನೆ ಎಂದು ತಿಳಿದು ರೈತನ ಮನೆಗೆ ಭೇಟಿ ಕೊಟ್ಟರಲ್ಲ ಅದು ಸಂತೋಷದ ವಿಚಾರ. ನಾನು ಬಂದಿಲ್ಲ ಅಂದರೆ ಸಚಿವರು ಬರುತ್ತಿರಲಿಲ್ಲವೇನೊ ಎಂದು ಹೇಳಿದರು.

ರಾಮನಗರ ಜನತೆ ನನ್ನ ತಂದೆಯನ್ನು ರಾಜಕೀಯವಾಗಿ ಬೆಳೆಸಿದ್ದಾರೆ. ಅವರಿಗೆ ಆಸೆ ನಿಖಿಲ್ ಇಲ್ಲಿಗೂ ಬರಲಿ ಎಂದು. ನಾನು ಎಲ್ಲಾ ಕಡೆ ಒಡಾಡುತ್ತೇನೆ ಎಂದರು. ನಂತರ ಮುಂದಿನ ಎಂಪಿ ನಿಖಿಲ್ ಎಂಬ ಅಭಿಮಾನಿಗಳ ಘೋಷಣೆ ವಿಚಾರವಾಗಿ ಮಾತನಾಡಿ, ಅಭಿಮಾನಿಗಳು, ಕಾರ್ಯಕರ್ತರು ನನ್ನ ಮೇಲೆ ವಿಶೇಷ ಪ್ರೀತಿ, ಗೌರವ ಇಟ್ಟಿದ್ದಾರೆ. ನನ್ನ ಕೊನೆ ಉಸಿರಿನವರೆಗೂ ಅವರಿಗಾಗಿ ಹೋರಾಟ ಮಾಡುತ್ತೇನೆ. ಮಂದೇನು ನನ್ನ ಕರ್ಮ ಭೂಮಿ ಮಂಡ್ಯನೇ, ನನ್ನ ಆಯ್ಕೆ ಮಂಡ್ಯನೆ. ಸೋಲು ಗೆಲುವು ರಾಜಕಾರಣದಲ್ಲಿ ಸಹಜ. ಹಾಗಾಂತ ಯಾವ ರಾಜಕಾರಣಿಗಳು ಮನೆಯಲ್ಲಿ ಕೂರಲ್ಲ ಎಂದು ತಿಳಿಸಿದರು.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ