Breaking News

ಆಸ್ಟ್ರೇಲಿಯಾ ವಿರುದ್ಧದ ಟಿ-20 ಸರಣಿಗೆ ಸೂರ್ಯ ನಾಯಕ

Spread the love

ಹೈದರಾಬಾದ್​: ವಿಶ್ವಕಪ್​ಗೂ ಮುನ್ನ ಆರಂಭವಾಗಿದ್ದ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯ ಏಕದಿನ ಪಂದ್ಯಗಳು ಮುಗಿದಿವೆ.

5 ಟಿ20 ಪಂದ್ಯಗಳು ಬಾಕಿ ಇದ್ದು, ಇದು ನವೆಂಬರ್​ 23ರಿಂದ ಆರಂಭವಾಗಲಿದೆ. ವಿಶ್ವಕಪ್ ಮುಗಿದ ನಾಲ್ಕು ದಿನಗಳ ಅವಧಿಯ ಅಂತರದಲ್ಲಿ ಸರಣಿ ಆರಂಭವಾಗುತ್ತಿದೆ. ಇದಕ್ಕೆ ಸೂರ್ಯಕುಮಾರ್​ ಯಾದವ್​ ನಾಯಕತ್ವದಲ್ಲಿ 15 ಜನ ಸದಸ್ಯರ ತಂಡವನ್ನು ಪ್ರಕಟಿಸಲಾಗಿದೆ.

ನವೆಂಬರ್ 23 ರಂದು ವಿಶಾಖಪಟ್ಟಣದಲ್ಲಿ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ-20ಸರಣಿ ಡಿಸೆಂಬರ್ 3 ರಂದು ಬೆಂಗಳೂರು​ನಲ್ಲಿ ಮುಕ್ತಾಯವಾಗಲಿದೆ. ಐರ್ಲೆಂಡ್​​ ಪ್ರವಾಸಕ್ಕೆ ಆಯ್ಕೆ ಆಗಿದ್ದ ತಂಡವನ್ನೇ ತೆಗೆದುಕೊಳ್ಳಲಾಗಿದ್ದು ಅದರಲ್ಲಿ ಎರಡು ಬದಲಾವಣೆ ಮಾಡಲಾಗಿದೆ.

ಜಸ್ಪ್ರೀತ್​ ಬುಮ್ರಾಗೆ ವಿಶ್ರಾಂತಿ: ಗಾಯದಿಂದ ಚೇತರಿಸಿಕೊಂಡ ನಂತರ ಐರ್ಲೆಂಡ್​ ಸಿರೀಸ್ ನಾಯಕತ್ವ, ಏಷ್ಯಾಕಪ್​ ಮತ್ತು ವಿಶ್ವಕಪ್​ನಲ್ಲಿ ಬುಮ್ರಾ ಆಡಿರುವುದರಿಂದ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಕಮ್​ಬ್ಯಾಕ್​ ಮಾಡಿದ ನಂತರ ಸತತ ಮೂರು ತಿಂಗಳ ಕಾಲ ತಂಡದಲ್ಲಿ ಬುಮ್ರಾ ಆಡಿದ್ದಾರೆ.ಸಂಜು ಸ್ಯಾಮ್ಸನ್​ಗೆ ಅನ್ಯಾಯ: ಐರ್ಲೆಂಡ್ ಸರಣಿಯಲ್ಲಿ ವಿಕೆಟ್​ ಕೀಪಿಂಗ್​ ಜೊತೆಗೆ ಬ್ಯಾಟಿಂಗ್​ ಸಹ ಮಾಡಿದ್ದ ಸಂಜು ಸ್ಯಾಮ್ಸನ್​ ಈ ಬಾರಿ ತಂಡದಲ್ಲಿ ಸ್ಥಾನ ಪಡೆದಿಲ್ಲ. ಜಿತೇಶ್ ಶರ್ಮಾ ಅವರನ್ನೇ ಪ್ರಮುಖ ಕೀಪರ್​ ಆಗಿ ತಂಡಕ್ಕೆ ತೆಗೆದುಕೊಳ್ಳಲಾಗಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ