Breaking News

ವಿಶ್ವಕಪ್ ಫೈನಲ್​​ನಲ್ಲಿ ಭಾರತದ ಸೋಲು: ನಿರಾಸೆಯಿಂದ ಯುವಕ ಸಾವು!

Spread the love

ಗುವಾಹಟಿ(ಅಸ್ಸೋಂ): ನಿನ್ನೆ ನಡೆದ ಐಸಿಸಿ ಕ್ರಿಕೆಟ್ ವಿಶ್ವಕಪ್ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋಲನುಭವಿಸಿದ್ದರಿಂದ ತೀವ್ರ ನಿರಾಸೆಯಿಂದ ಖಿನ್ನತೆಗೆ ಒಳಗಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಗುವಾಹಟಿಯ ಸಾವ್​ಕುಚಿಯಲ್ಲಿ ನಡೆದಿದೆ.

ಮೃಣಾಲ್ ಮಜುಂದಾರ್‌(20) ಮೃತ ಯುವಕ.

ಮೃತ ಮೃಣಾಲ್ ಕುಟುಂಬಸ್ಥರ ಪ್ರಕಾರ, ಮೃಣಾಲ್ ನಿನ್ನೆ ಭಾರತದ ಸೋಲಿನಿಂದ ನಿರಾಸೆಗೊಂಡು ಊಟ ಸೇವಿಸದೇ ರಾತ್ರಿ 11 ಗಂಟೆಗೆ ಮಲಗಿದ್ದರು. ಮೃಣಾಲ್ ಬೆಳಗ್ಗೆ ಎಷ್ಟೊತ್ತಾದರೂ ಏಳದಿದ್ದಾಗ. ಅನುಮಾನಗೊಂಡ ಕುಟುಂಬಸ್ಥರು, ಮೃಣಾಲ್​ ಮಲಗಿದ್ದ ಕೊಠಡಿಯ ಬಾಗಿಲು ಮುರಿದು ಒಳ ಪ್ರವೇಶಿಸಿದ್ದಾರೆ. ಈ ವೇಳೆ ಮೃಣಾಲ್​ ಪ್ರಜ್ಞಾಹೀನ ಸ್ಥಿತಿಯಲ್ಲಿ ಇರುವುದನ್ನು ಕಂಡು ತಕ್ಷಣ ಅವರನ್ನು ಜಿಎಂಸಿಎಚ್‌ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಮೃಣಾಲ್​ನನ್ನು ಪರೀಕ್ಷಿಸಿದ ವೈದ್ಯರು, ಮೃಣಾಲ್ ಈಗಾಗಲೇ​ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಮೃತ ಮೃಣಾಲ್ ಮಜುಂದಾರ್ ಐಟಿಐ ವಿದ್ಯಾರ್ಥಿಯಾಗಿದ್ದಾರೆ. ಮೃಣಾಲ್ ಭಾರತ ಸೋತಿದ್ದರಿಂದ ನಿರಾಸೆಗೊಂಡು ಸಾವನ್ನಪ್ಪಿದ್ದಾರೆ


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ