ಗುವಾಹಟಿ(ಅಸ್ಸೋಂ): ನಿನ್ನೆ ನಡೆದ ಐಸಿಸಿ ಕ್ರಿಕೆಟ್ ವಿಶ್ವಕಪ್ ಫೈನಲ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋಲನುಭವಿಸಿದ್ದರಿಂದ ತೀವ್ರ ನಿರಾಸೆಯಿಂದ ಖಿನ್ನತೆಗೆ ಒಳಗಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಗುವಾಹಟಿಯ ಸಾವ್ಕುಚಿಯಲ್ಲಿ ನಡೆದಿದೆ.
ಮೃಣಾಲ್ ಮಜುಂದಾರ್(20) ಮೃತ ಯುವಕ.
ಮೃತ ಮೃಣಾಲ್ ಕುಟುಂಬಸ್ಥರ ಪ್ರಕಾರ, ಮೃಣಾಲ್ ನಿನ್ನೆ ಭಾರತದ ಸೋಲಿನಿಂದ ನಿರಾಸೆಗೊಂಡು ಊಟ ಸೇವಿಸದೇ ರಾತ್ರಿ 11 ಗಂಟೆಗೆ ಮಲಗಿದ್ದರು. ಮೃಣಾಲ್ ಬೆಳಗ್ಗೆ ಎಷ್ಟೊತ್ತಾದರೂ ಏಳದಿದ್ದಾಗ. ಅನುಮಾನಗೊಂಡ ಕುಟುಂಬಸ್ಥರು, ಮೃಣಾಲ್ ಮಲಗಿದ್ದ ಕೊಠಡಿಯ ಬಾಗಿಲು ಮುರಿದು ಒಳ ಪ್ರವೇಶಿಸಿದ್ದಾರೆ. ಈ ವೇಳೆ ಮೃಣಾಲ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಇರುವುದನ್ನು ಕಂಡು ತಕ್ಷಣ ಅವರನ್ನು ಜಿಎಂಸಿಎಚ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಮೃಣಾಲ್ನನ್ನು ಪರೀಕ್ಷಿಸಿದ ವೈದ್ಯರು, ಮೃಣಾಲ್ ಈಗಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಮೃತ ಮೃಣಾಲ್ ಮಜುಂದಾರ್ ಐಟಿಐ ವಿದ್ಯಾರ್ಥಿಯಾಗಿದ್ದಾರೆ. ಮೃಣಾಲ್ ಭಾರತ ಸೋತಿದ್ದರಿಂದ ನಿರಾಸೆಗೊಂಡು ಸಾವನ್ನಪ್ಪಿದ್ದಾರೆ