Breaking News
Home / ರಾಜಕೀಯ / ಶಾಲೆಯ ಮೊದಲ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು

ಶಾಲೆಯ ಮೊದಲ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು

Spread the love

ವಿಜಯಪುರ: ಶಾಲೆಯ ಒಂದನೇ ಮಹಡಿಯಿಂದ ಆಯತಪ್ಪಿ ನೀರಿನ ಟ್ಯಾಂಕ್ ಮೇಲೆ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಇಂಡಿ ಪಟ್ಟಣದಲ್ಲಿ ಬುಧವಾರ ನಡೆದಿದೆ. ಪಟ್ಟಣದಲ್ಲಿರುವ ಖಾಸಗಿ ಶಾಲೆಯಲ್ಲಿ ಯುಕೆಜಿ ಓದುತ್ತಿದ್ದ ಶಿವಾರಾಜ್ ರೋಡಗಿ ಮೃತಪಟ್ಟ ಬಾಲಕ.

 

ಮೆಟ್ಟಿಲಿನ ಮೇಲಿಂದ ಬಿದ್ದ ತಕ್ಷಣ ಬಾಲಕ ಶಿವಾರಾಜ್​ನನ್ನು ಇಂಡಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರದ ಖಾಸಗಿ ಆಸ್ಪತ್ರೆಗೆ ತರಲಾಗಿತ್ತು. ಆದರೆ, ದಾರಿ ಮಧ್ಯೆಯೇ ಬಾಲಕ ಮೃತಪಟ್ಟಿದ್ದಾನೆ. ಬಾಲಕನನ್ನು ಆಸ್ಪತ್ರೆಗೆ ತಂದ ವಿಷಯ ತಿಳಿದ ಸಂಬಂಧಿಕರು, ಬಂದು ನೋಡಿದಾಗ ಬಾಲಕ ಮೃತಪಟ್ಟಿದ್ದ. ಈ ಬಗ್ಗೆ ವೈದ್ಯರನ್ನು ಕೇಳಿದಾಗ, ಶಾಲಾ ಆಡಳಿತ ಮಂಡಳಿಯವರು ಕರೆದುಕೊಂಡ ಬರುವ ಮೊದಲೇ ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ.

ಪೋಷಕರ ಆಕ್ರೋಶ: ಆದರೆ, ಬಾಲಕ ಮೃತಪಟ್ಟರೂ ತಮಗೆ ಸರಿಯಾದ ಮಾಹಿತಿ ನೀಡಿಲ್ಲ, ನಿಮ್ಮ ಹುಡುಗ ಶಾಲೆಯಲ್ಲಿ ಬಿದ್ದಿದ್ದಾನೆ, ಆಸ್ಪತ್ರೆಗೆ ಬನ್ನಿ ಎಂದಷ್ಟೇ ಮಾಹಿತಿ ನೀಡಿದ್ದಾರೆ ಎಂದು ಪೋಷಕರು ಶಾಲಾ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿದ ಇಂಡಿ ಪೊಲೀಸರು, ವಿಜಯಪುರಕ್ಕೆ ಆಗಮಿಸಿ ಮೃತ ಬಾಲಕನ ಪೋಷಕರ ಜೊತೆ ಮಾತುಕತೆ ನಡೆಸಿ ಮಾಹಿತಿ ಕಲೆ ಹಾಕಿದರು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೆಲ ಸಂಘಟನೆಗಳ ಮುಖಂಡರು ಇದೇ ವೇಳೆ ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ