Breaking News

ಲೋಕಸಭೆ ಚುನಾವಣೆ: ಎಲ್ಲರೂ ಕೂಡಿ ಕೆಲಸ ಮಾಡಲು ಒಪ್ಪಿದ್ದೇವೆ- ರಮೇಶ್ ಜಾರಕಿಹೊಳಿ

Spread the love

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಎಲ್ಲರೂ ಕೂಡಿ ಕೆಲಸ ಮಾಡಲು ಒಪ್ಪಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಭೇಟಿ ಬಳಿಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

ಸದಾಶಿವನಗರ ತಮ್ಮ ನಿವಾಸದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಮ್ಮ ನೋವು ಏನು ಅಂತ ಈಗ ಹೇಳೋದಕ್ಕೆ ಬರಲ್ಲ. ನಾವು ಇಬ್ಬರೂ ಸೇರಿ ಚರ್ಚೆ ಮಾಡಿದ್ದೇವೆ. ನಾಲ್ಕು ಗೋಡೆಗಳ ಮಧ್ಯೆ ಮಾಡಿದ ಚರ್ಚೆಯನ್ನು ಬಹಿರಂಗವಾಗಿ ಹೇಳಲ್ಲ. ವಿಜಯೇಂದ್ರ ಅವರು ಈಗ ನಮ್ಮ ಪಕ್ಷದ ರಾಜ್ಯಾಧ್ಯಕ್ಷರು, ಅವರ ಬಗ್ಗೆ ನಾವು ಪ್ರಶ್ನೆ ಮಾಡಲ್ಲ. ನಿನ್ನೆ ನಾನು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್, ಶಾಸಕ ಸುನೀಲ್ ಕುಮಾರ್ ಅವರು ಸೇರಿ ಚರ್ಚೆ ಮಾಡಿ, ಸಹಕಾರ ಕೊಡಲು ನಿರ್ಣಯ ತೆಗೆದುಕೊಂಡಿದ್ದೇವೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಮ್ಮ ಪಕ್ಷದ ಗೆಲುವಿಗಾಗಿ ಎಲ್ಲಾ ನಾಯಕರು ಕೂಡಿ ಕೆಲಸ ಮಾಡಲು ಒಪ್ಪಿದ್ದೇವೆ ಎಂದರು.

ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾದ ಬಳಿಕ ಇವತ್ತು ನಮ್ಮ ಬಳಿ ಬಂದಿದ್ದಾರೆ. ಎಲ್ಲವೂ ಈಗ ಸರಿಯಾಗಿದೆ. ನಾವೆಲ್ಲ ಒಟ್ಟಿಗೆ ಕೆಲಸ ಮಾಡುತ್ತೇವೆ. ನಾವು ಅಸಮಾಧಾನ ತೋರಿಸಲ್ಲ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ, ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕರಾಗಿ ಒಪ್ಪಿಕೊಂಡಿದ್ದೇವೆ. ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಸಹಕಾರ ಕೊಡುತ್ತೇವೆ. ಬಿಜೆಪಿಯಲ್ಲಿ ಪಕ್ಷ ಸಂಘಟನೆ ಶುರು ಮಾಡುತ್ತೇವೆ. ಅಸಮಾಧಾನ ಇತ್ತು, ನಾವೂ ಮನುಷ್ಯರೇ ಅಲ್ವಾ?. ಈಗ ನಮ್ಮ ಟಾಸ್ಕ್ ಮೋದಿಯವರನ್ನು ಮತ್ತೆ ದೇಶದ ಪ್ರಧಾನಿ ಮಾಡೋದು. ಈಗ ಅಸಮಧಾನ ಇಲ್ಲ, ಎಲ್ಲವೂ ಸರಿ ಹೋಗಿದೆ ಎಂದು ಹೇಳಿದರು.

 


Spread the love

About Laxminews 24x7

Check Also

ಬೆಳಗಾವಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ ಜಾರಕಿಹೊಳಿ ಬಣ ಸಂಪೂರ್ಣ ‌ಹಿಡಿತ; ಜೊಲ್ಲೆ, ದೊಡ್ಡಗೌಡ್ರ, ಕುಲಗೋಡೆ ಅಧ್ಯಕ್ಷ ಸ್ಥಾನದ ರೇಸಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ‌ ಅಂಪೈರ್

Spread the loveಬೆಳಗಾವಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ ಜಾರಕಿಹೊಳಿ ಬಣ ಸಂಪೂರ್ಣ ‌ಹಿಡಿತ; ಜೊಲ್ಲೆ, ದೊಡ್ಡಗೌಡ್ರ, ಕುಲಗೋಡೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ