Breaking News

ಮದ್ವೆ ಮಂಟಪಕ್ಕೆ ಹೋಗುತ್ತಿದ್ದಾಗ ವರ ಎಸ್ಕೇಪ್: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಕೈಕೊಟ್ಟ ಪ್ರಿಯಕರ

Spread the love

ತುಮಕೂರು, (ನವೆಂಬರ್ 08): ಬೆಂಗಳೂರಿನ ನೆಲಗದರನಹಳ್ಳಿ ಹಾಗೂ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಯುವತಿ ಸಾಮಾಜಿಕ ಜಾಲತಾಣಗಳಲ್ಲಿ (Social Media) ಪರಿಚಯವಾಗಿದ್ದು, ಬಳಿಕ ಇಬ್ಬರ ನಡುವೆ ಪ್ರೇಮಾಂಕುರವಾಗಿದೆ(Love). ಬಳಿಕ ಬೆಂಗಳೂರಿನ (Bengaluru) ನೆಲಗದರನಹಳ್ಳಿ ಮೂಲಕ ಗಜೇಂದ್ರ, ಮದುವೆಯಾಗುವುದಾಗಿ (Marriage) ಎರಡು ವರ್ಷಗಳಿಂದ ಯುವತಿಯನ್ನು ಕರೆದುಕೊಂಡು ಎಲ್ಲೊಂದರಲ್ಲಿ ಸುತ್ತಾಡಿದ್ದಾನೆ. ಆದ್ರೆ, ಇದೀಗ ಮದುವೆ ಮುಹೂರ್ತ ಸಮೀಪಿಸುತ್ತಿದ್ದಂತೆಯೇ ಗಜೇಂದ್ರ ಎಸ್ಕೇಪ್ ಆಗಿದ್ದಾನೆ. ಹೌದು…ಬೆಂಗಳೂರಿನ ಪಿಣ್ಯಾದ ದುಗ್ಗಾಲಮ್ಮ ದೇವಾಲಯದಲ್ಲಿ ಇಬ್ಬರ ಮದುವೆ ಫಿಕ್ಸ್ ಆಗಿತ್ತು. ಆದ್ರೆ, ಗಜೇಂದ್ರ ಮದುವೆಯಾಗಲು ಹೋಗುತ್ತಿದ್ದಾಗ ಮಾರ್ಗಮಧ್ಯೆಯೇ ಪರಾರಿಯಾಗಿದ್ದಾನೆ.

ಪೊಲೀಸರ ಮುಂದೆ ಒಪ್ಪಿಕೊಂಡಿದ್ದ ಗಜೇಂದ್ರ

ಈ ಮೊದಲೇ ಇವರಿಬ್ಬರ ಪ್ರೀತಿ ಪೊಲೀಸ್​ ಠಾಣೆ ಮೆಟ್ಟಿಲೇರಿತ್ತು. ಯುವತಿಯನ್ನು ಮದುವೆಯಾಗುವಂತೆ ಗಜೇಂದ್ರನಿಗೆ ಪೊಲೀಸರು ಬುದ್ಧಿ ಹೇಳಿದ್ದರು.ಇದಕ್ಕೆ ಠಾಣೆಯಲ್ಲಿ ಗಜೇಂದ್ರ, ಯುವತಿಯನ್ನು ಮದುವೆಯಾಗುವುದಾಗಿ ಒಪ್ಪಿಕೊಂಡು ಮುಚ್ಚಳಿಕೆ ಪತ್ರವನ್ನೂ ಸಹ ಬರೆದುಕೊಟ್ಟಿದ್ದ. ಆದ್ರೆ, ತುಮಕೂರಿನಿಂದ ಬೆಂಗಳೂರಿನ ಪಿಣ್ಯಾದ ದುಗ್ಗಾಲಮ್ಮ ದೇವಾಲಯ ಬಳಿಗೆ ಮದುವೆಯಾಗಲು ಹೋಗುತ್ತಿದ್ದಾಗ ನೆಲಗದರನಹಳ್ಳಿ ಬಳಿ ಕಾರು ಇಳಿದು ಎಸ್ಕೇಪ್ ಆಗಿದ್ದಾನೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ