Breaking News

ರಾಜ್ಯ ಸರ್ಕಾರದಿಂದ ದರೋಡೆಕೋರರ ರಕ್ಷಣೆ:H.D.K.

Spread the love

ಬೆಂಗಳೂರು: ದರೋಡೆಕೋರರ ರಕ್ಷಣೆಗೆ ಕಾಂಗ್ರೆಸ್ ಸರ್ಕಾರ ನಿಂತಿದೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು. ಜೆ.ಪಿ.ನಗರದ ತಮ್ಮ ನಿವಾಸದ ಬಳಿ ಇಂದು ಬೆಳಿಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ತನಿಖೆಗಾಗಿ ಸಿಬಿಐಗೆ ನೀಡಿದ್ದ ಅನುಮತಿಯನ್ನು ಸರ್ಕಾರ ವಾಪಸ್​ ಪಡೆದ ವಿಚಾರಕ್ಕೆ ಅವರು ಖಾರವಾಗಿ ಪ್ರತಿಕ್ರಿಯಿಸಿದರು.

ಈ ಸರ್ಕಾರದಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ಮಾತನಾಡುವುದು ಬಹಳ ಇದೆ. ಚರ್ಚೆ ಮಾಡೋಣ, ಇದರ ಬಗ್ಗೆ ಆತುರ ಬೇಡ. ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಹೆಚ್ಚು ಮಾತು ಬೇಡ ಎಂದರು.

ಮರ್ಯಾದೆ ಇರುವವರು ಹೆದರುತ್ತಾರೆ, ಮರ್ಯಾದೆ ಇಲ್ಲದವರಿಗೆ ಕೋರ್ಟ್​ನಲ್ಲಿದ್ದರೆ ಏನು, ಯಾವುದರಲ್ಲಿದ್ದರೆ ಏನು?. ಯಾವುದನ್ನು ಬೇಕಾದರೂ ಕೊಂಡುಕೊಳ್ಳುತ್ತೇವೆ ಎನ್ನುವ ದುರಂಹಕಾರದಲ್ಲಿರುವವರಿಗೆ ಏನು ಹೇಳುವುದು ಎಂದು ಪರೋಕ್ಷವಾಗಿ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದರು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ