Breaking News

‘ಅಂಬರೀಶ್ ಆಶೀರ್ವಾದದಿಂದ ಮಗನ ಸಿನಿಮಾ ಬಿಡುಗಡೆ’: ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ

Spread the love

ಮಂಡ್ಯ: ಇಂದು ಕನ್ನಡಿಗರ ಮೆಚ್ಚಿನ ನಟ ಅಂಬರೀಶ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ, ಮಂಡ್ಯದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಿದವು.

ಅಂಬರೀಶ್ ಹುಟ್ಟೂರಾದ ಮದ್ದೂರು ತಾಲೂಕಿನ ದೊಡ್ಡರಸಿನಕೆರೆಗೆ ಪತ್ನಿ, ಸಂಸದೆ ಸುಮಲತಾ ಅಂಬರೀಶ್ ಅವರು ಭೇಟಿ ಕೊಟ್ಟು ಅಂಬಿ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದರು. ಸುಮಲತಾ ಅವರ ಜೊತೆ ಹಿರಿಯ ನಟ ದೊಡ್ಡಣ್ಣ, ರಾಕ್​ಲೈನ್ ವೆಂಕಟೇಶ್ ಸಹ ಭಾಗಿಯಾಗಿದ್ದರು.

ಮಾಧ್ಯಮದವರ ಜೊತೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ಇಂದು ಅಂಬರೀಶ್ ಅವರ 5ನೇ ವರ್ಷದ ಪುಣ್ಯಸ್ಮರಣೆ. ಮಂಡ್ಯದಲ್ಲಿಂದು ಅಂಬಿ ಕನಸಿನ ಫೌಂಡೇಶನ್ ಲೋಕಾರ್ಪಣೆಯಾಗುತ್ತಿದೆ. ಅಭಿಮಾನಿಗಳು ಅಂಬಿ ಅವರನ್ನು ಕಲಿಯುಗದ ಕರ್ಣ ಎಂದು ಕರೆದರು. ಅದೇ ಹಾದಿಯಲ್ಲಿ ಅವರ ಲೆಗೆಸಿ ಮುಂದುವರೆಸುತ್ತೇವೆ. ಹಾಗಾಗಿ, ಅವರ ಪುಣ್ಯಸ್ಮರಣೆಯ ದಿನದಂದು ಅಂಬರೀಶ್ ಫೌಂಡೇಶನ್ ಉದ್ಘಾಟನೆಯಾಗುತ್ತಿದೆ. ಅಂಬಿ ಅವರನ್ನು ಯಾರೂ ಮರೆತಿಲ್ಲ. ನಾನು ಹೋದ ಕಡೆಯಲ್ಲಾ ಅಂಬರೀಶ್ ಅವರನ್ನು ನೆನೆಯುತ್ತಾರೆ. ಅವರ ಬಗ್ಗೆ ಪ್ರತಿದಿನ, ಪ್ರತಿಕ್ಷಣ ಮಾತನಾಡುತ್ತಾರೆ. ಅಂಬಿ ನೆನಪಾಗದ ದಿನ, ಕ್ಷಣವೇ ಇಲ್ಲ ಎಂದು ತಿಳಿಸಿದರು.


Spread the love

About Laxminews 24x7

Check Also

ಬೆಣ್ಣೆನಗರಿಗೆ ಬರಲಿದೆ ಐಟಿ ಪಾರ್ಕ್

Spread the loveದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇಲ್ಲಿಲ್ಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ