Breaking News

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ರೈತರಿಂದ ಮನವಿ: ಕಳಸಾ ಬಂಡೂರಿ, ಮಹದಾಯಿ ಯೋಜನೆ ಜಾರಿ ಮಾಡಿ

Spread the love

ಹುಬ್ಬಳ್ಳಿ: ಕಳಸಾ ಬಂಡೂರಿ ಹಾಗೂ ಮಹದಾಯಿ ಯೋಜನೆಯ ಕಾಮಗಾರಿಯನ್ನು ಕೂಡಲೇ ಪ್ರಾರಂಭ ಮಾಡಬೇಕು. ಅಲ್ಲದೇ ರೈತರ ಸಮಸ್ಯೆಗೆ ಸರ್ಕಾರ ಕೂಡಲೇ ಸ್ಪಂದಿಸುವಂತೆ ಆಗ್ರಹಿಸಿ ಕಳಸಾ ಬಂಡೂರಿ ಹಾಗೂ ಮಹದಾಯಿ ಹೋರಾಟಗಾರರು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರಿಗೆ ಮನವಿ ಸಲ್ಲಿಸಿದರು.

ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಮಾತನಾಡಿ, “ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಭೂಪೇಂದ್ರ ಯಾದವ ಅವರ ಜೊತೆ ಮಾತನಾಡಿದ್ದೇನೆ. ಅರಣ್ಯ ಇಲಾಖೆ ಕ್ಲಿಯರನ್ಸ್ ಸೇರಿದಂತೆ ಮೂರು ವಿಷಯ ಇರುವುದರಿಂದ ಕೂಲಂಕಷವಾಗಿ ಪರಿಶೀಲನೆ ಮಾಡುವುದಿದೆ. ಹೀಗಾಗಿ ಸರಿಯಾಗಿ‌ ಮುಂದುವರೆಯಬೇಕು. ಡಿಸಿಎಂ ಡಿ‌ ಕೆ ಶಿವಕುಮಾರ್​ ಅವರ ಜೊತೆ ಈ ಕುರಿತು ಮಾತನಾಡಿದ್ದೇನೆ. ಅವರು ಸರಿಯಾದ ಮಾಹಿತಿ ತಗೆದುಕೊಂಡು ದೆಹಲಿಗೆ ಬರುವುದಾಗಿ ಹೇಳಿದ್ದಾರೆ. ಆಗ ಎಲ್ಲ ಕ್ಲಿಯರೆನ್ಸ್ ಮಾಡಿ ಕೊಡುವ ಭರವಸೆ ನೀಡಿದ್ದೇನೆ” ಎಂದರು.

ಕಳಸಾ ಬಂಡೂರಿ ಹೋರಾಟಗಾರ ಸುಭಾಷ್​ ಗೌಡ ಮಾತನಾಡಿ, “ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರನ್ನು ಭೇಟಿ ಮಾಡಿ ಕಳಸಾ ಬಂಡೂರಿ ಹಾಗೂ ಮಹದಾಯಿ ಯೋಜನೆಯ ಕಾಮಗಾರಿಯನ್ನು ಕೂಡಲೇ ಪ್ರಾರಂಭ ಮಾಡಬೇಕು ಎಂದು ಮನವಿ ಮಾಡಿದ್ದೇವೆ. ಸಚಿವರು ಮುಂದಿನ ಒಂದೂವರೆ ತಿಂಗಳಲ್ಲಿ ಯೋಜನೆಗೆ ಯಾವುದೇ ಕಾನೂನು ಅಡೆತಡೆ ಇಲ್ಲದಿರುವಂತೆ ಮಾಡುವುದಾಗಿ ಭರವಸೆ ಕೊಟ್ಟಿದ್ದಾರೆ. ಅವರು ಮಾತಿಗೆ ತಪ್ಪಿದರೇ ಮುಂದೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡುತ್ತಿದ್ದೇವೆ. ಇನ್ನು ರೈತರ ಸಾಲ ಮನ್ನಾ, ಬೆಳೆ ಪರಿಹಾರ ಕೊಡಬೇಕು ಎಂದು ಸಚಿವರಿಗೆ ಒತ್ತಾಯ ಮಾಡಿದ್ದೇವೆ” ಎಂದು ತಿಳಿಸಿದರು.


Spread the love

About Laxminews 24x7

Check Also

ಕುರಿ ಕಾಯುವವನ ಮಗನ ಯುಪಿಎಸ್ಸಿ ಸಾಧನೆ

Spread the loveಬೆಳಗಾವಿ: ತಂದೆ ಕುರಿ ಕಾಯುತ್ತಾರೆ. ತಾಯಿ ಹೊಲದಲ್ಲಿ ಕೆಲಸ ಮಾಡುತ್ತಾರೆ. ಮನೆಯಲ್ಲಿ ಬಡತನ. ಮಗನಿಗೆ ಮಾತ್ರ ಇಡೀ ದೇಶವೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ