Breaking News
Home / ಹುಬ್ಬಳ್ಳಿ / ತಪ್ಪಿಸಿಕೊಳ್ಳಲು ಪ್ರಯತ್ನ ನಟೋರಿಯಸ್ ರೌಡಿಶೀಟರ್​ಗೆ ಗುಂಡೇಟು

ತಪ್ಪಿಸಿಕೊಳ್ಳಲು ಪ್ರಯತ್ನ ನಟೋರಿಯಸ್ ರೌಡಿಶೀಟರ್​ಗೆ ಗುಂಡೇಟು

Spread the love

ಹುಬ್ಬಳ್ಳಿ: ಸ್ಥಳ ಮಹಜರು ಮಾಡಲು ಕರೆತಂದ ವೇಳೆ ಪಿಎಸ್​ಐ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ನಟೋರಿಯಸ್ ರೌಡಿಶೀಟರ್ ಸತೀಶ್​ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಹಲ್ಲೆಯಿಂದ ಗಾಯಗೊಂಡ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯ ಪಿಎಸ್​ಐ ಮತ್ತು ಗುಂಡೇಟು ತಿಂದ ರೌಡಿಶೀಟರ್​ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಹು-ಧಾ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ, ನಟೋರಿಯಸ್ ರೌಡಿಶೀಟರ್ ಸತೀಶನನ್ನು ಕರೆದುಕೊಂಡು ಸ್ಥಳ ಮಹಜರಿಗೆ ಹೋದಾಗ, ಆತ ಪಿಎಸ್‌ಐ ವಿನೋದ ಅವರಿಗೆ ಕಲ್ಲಿನಿಂದ ಹೊಡೆದು ತಪ್ಪಿಸಿಕೊಳ್ಳಲು ಪ್ರಯತ್ನ ಮಾಡಿದಾಗ ಫೈರಿಂಗ್ ಮಾಡಲಾಗಿದೆ ಎಂದು ತಿಳಿಸಿದರು.

ಸತೀಶ ನಟೋರಿಯಸ್ ರೌಡಿ‌ಶೀಟರ್ ಆಗಿದ್ದಾನೆ. ಈತನ ಮೇಲೆ 5ಕ್ಕೂ ಹೆಚ್ಚು ಪ್ರಕರಣಗಳಿವೆ. ಕೊಲೆ, ಕೊಲೆಯತ್ನ, ಮನೆಗಳಿಗೆ ಬೆಂಕಿ ಹಚ್ಚಿದ ಪ್ರಕರಣಗಳು ನಗರದ ವಿವಿಧ ಠಾಣೆಯಲ್ಲಿ ದಾಖಲಾಗಿವೆ. ಈತ ನಮ್ಮ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾನೆ. ಆಗ ಇನ್ಸ್​ಪೆಕ್ಟರ್ ರಫೀಕ ತಹಶೀಲ್ದಾರ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ರೂ ನಿಲ್ಲದಿದ್ದಾಗ ಕಾಲಿಗೆ ಗುಂಡು ಹಾರಿಸಲಾಗಿದೆ. ಅವಳಿನಗರಲ್ಲಿ ರೌಡಿ ಶೀಟರ್​ಗಳನ್ನು ಹತ್ತಿಕ್ಕಲು ಕಠಿಣ ಕ್ರಮ ಜರುಗಿಸಲಾಗುತ್ತಿದೆ ಎಂದು ಪೊಲೀಸ್ ಕಮಿಷನರ್ ಎಚ್ಚರಿಕೆ ನೀಡಿದ್ದಾರೆ


Spread the love

About Laxminews 24x7

Check Also

ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ – ಧಾರವಾಡ ಅರ್ಧ ದಿನ ಬಂದ್!

Spread the loveಧಾರವಾಡ: ಇಡೀ ದೇಶದ ಗಮನ ಸೆಳೆದಿರುವ ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಖಂಡಿಸಿ ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ