Breaking News
Home / ರಾಜಕೀಯ / ಮಕ್ಕಳನ್ನು ಬಸ್ ನಿಲ್ದಾಣದ ಬಳಿ ಬಿಟ್ಟು ಮಹಿಳೆ ನಾಪತ್ತೆ

ಮಕ್ಕಳನ್ನು ಬಸ್ ನಿಲ್ದಾಣದ ಬಳಿ ಬಿಟ್ಟು ಮಹಿಳೆ ನಾಪತ್ತೆ

Spread the love

ಕಾರವಾರ (ಉತ್ತರ ಕನ್ನಡ) : ಮಕ್ಕಳನ್ನು ಬಸ್ ನಿಲ್ದಾಣದ ಬಳಿ ಬಿಟ್ಟು ನಾಪತ್ತೆಯಾಗಿದ್ದ ಮಹಿಳೆಯೋರ್ವಳ ಬೈಕ್ ಕುಮಟಾದ ಹೆಡ್ ಬಂದರು ಬಳಿ ಪತ್ತೆಯಾಗಿದೆ.

ಬೈಕ್​ನಲ್ಲಿ ಮಹಿಳೆ ಬರೆದಿಟ್ಟಿದ್ದರು ಎನ್ನಲಾದ ಡೆತ್​ನೋಟ್ ಸಹ ಸಿಕ್ಕಿದೆ. ಇದೀಗ ಕಣ್ಮರೆಯಾಗಿರುವ ಮಹಿಳೆಗಾಗಿ ಸಮುದ್ರದಲ್ಲಿ ಹುಡುಕಾಟ ಮುಂದುವರೆದಿದೆ.

ಕುಮಟಾ ತಾಲೂಕಿನ ಸಾಂತಗಲ್ ಮೂಲದ ನಿವೇದಿತಾ ನಾಗರಾಜ ಭಂಡಾರಿ ನಾಪತ್ತೆಯಾಗಿರುವ ವಿವಾಹಿತೆ. ಶನಿವಾರ ಮನೆಯಿಂದ ಇಬ್ಬರು ಗಂಡುಮಕ್ಕಳನ್ನು ಸ್ಕೂಟಿ ಮೇಲೆ ಕರೆತಂದಿದ್ದ ಈಕೆ ಕುಮಟಾದ ಪಿಕ್​ಅಪ್ ಬಸ್ ನಿಲ್ದಾಣದ ಬಳಿ ಬಿಟ್ಟು ತೆರಳಿದ್ದಳು. ಆದರೆ ನಂತರ ಬಾರದೆ ಇದ್ದಾಗ ಮಹಿಳೆಗಾಗಿ ಹುಡುಕಾಟ ನಡೆಸಿದ್ದು, ಈಕೆಯ ಸ್ಕೂಟರ್ ಕುಮಟಾದ ಹೆಡ್ ಬಂದರು ಬಳಿ ಪತ್ತೆಯಾಗಿತ್ತು.

 ಡೆತ್​ನೋಟ್​ಕಾಲುಂಗುರ ಹಾಗೂ ಡೆತ್​ನೋಟ್ ಪತ್ತೆ : ಕೊನೆಗೆ ಈ ಬಗ್ಗೆ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಹಾಗೂ ಲೈಫ್ ಗಾರ್ಡ್ ಸಿಬ್ಬಂದಿ ಮಹಿಳೆಗಾಗಿ ಹೆಡ್ ಬಂದರು ಬಳಿ ಹುಡುಕಾಟ ನಡೆಸಿದ್ದರು. ಆದರೆ ಸಮುದ್ರದಲ್ಲಿ ಮಹಿಳೆಯ ವೇಲ್ ಮಾತ್ರ ಸಿಕ್ಕಿದ್ದರಿಂದ ರಾತ್ರಿಯಾದ ಕಾರಣ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಆದರೆ ಈ ವೇಳೆ ಮಹಿಳೆ ನಿಲ್ಲಿಸಿದ್ದ ಬೈಕ್​ನಲ್ಲಿ ಆಕೆಯ ಮಾಂಗಲ್ಯ, ಕಾಲುಂಗುರ ಹಾಗೂ ಡೆತ್​ನೋಟ್ ಕೂಡ ಪತ್ತೆಯಾಗಿದೆ.


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ