Breaking News

ಸಂಸ್ಕೃತ ಭಾಷೆ ಮಾತನಾಡಿ ದೇಶದ ಗಮನ ಸೆಳೆದ ನಂದೇಶ್ವರ ಗ್ರಾಮ

Spread the love

ಚಿಕ್ಕೋಡಿ : ಭಾರತ ದೇಶದ ಪರಂಪರೆಯಲ್ಲಿ ಮಠ – ಮಂದಿರಗಳು ತನ್ನದೇ ಆದಂತಹ ಪ್ರಮುಖ ಪಾತ್ರ ವಹಿಸಿವೆ.

ಆಯಾ ಕಾಲಘಟ್ಟಕ್ಕೆ ಅನುಗುಣವಾಗಿ ಸಮಾಜಕ್ಕೆ ಕೊಡುಗೆಗಳನ್ನು ನೀಡಿ, ತನ್ನ ಸುತ್ತಮುತ್ತಲಿನ ವಾತಾವರಣದಲ್ಲಿ ಶಿಕ್ಷಣ, ಅನ್ನದಾಸೋಹ, ಸಂಸ್ಕೃತಿ, ಉತ್ತಮ ವಿಚಾರಧಾರೆ, ಭಕ್ತಿ ಭಂಡಾರಗಳನ್ನು ಸಾರುತ್ತ ಮಠಗಳ ಚಾರಿತ್ರ್ಯವನ್ನು ಇತಿಹಾಸ ಪುಟಗಳಲ್ಲಿ ಉಳಿಯುವಂತೆ ಹಲವು ಮಠಾಧೀಶರು ಕೂಡಾ ಕಾರ್ಯ ಮಾಡಿದ್ದಾರೆ. ಅದರಂತೆ ಇಲ್ಲಿನ ಗ್ರಾಮವೊಂದು ಸಂಸ್ಕೃತ ಭಾಷೆಯಿಂದಲೇ ಪ್ರಸಿದ್ಧಿ ಹೊಂದಿದೆ.

ಆಧುನಿಕ ಯುಗದಲ್ಲಿ ಹಲವು ಮಠಾಧೀಶರುಗಳ ನಡುವೆ ನಂದೇಶ್ವರ ಗ್ರಾಮದ ಪರಮ ಪೂಜ್ಯ ಸದ್ಗುರು ಶ್ರೀ ದುಂಡೇಶ್ವರ ಮಹಾಸ್ವಾಮಿಗಳವರು ಸಂಸ್ಕೃತ ಕ್ರಾಂತಿ ಮಾಡಿದ್ದು, ದೇಶವೇ ಒಂದು ಸಾರಿ ಈ ಗ್ರಾಮವನ್ನು ತಿರುಗಿ ನೋಡುವಂತೆ ಶ್ರಮಿಸಿದ್ದಾರೆ. ಗ್ರಾಮದ ಎಲ್ಲರಿಗೂ ಸಂಸ್ಕೃತ ಭಾಷೆ ಕಲಿಸಿ, ಪರಂಪರೆಯ ದೇವಲಿಪಿಯ ಉಳಿವಿಗೆ ಶ್ರೀಗಳು ಮುಂದಾಗಿದ್ದಾರೆ. ಈ ಗ್ರಾಮದ ಬಹುತೇಕರು ಸಂಸ್ಕೃತ ಭಾಷೆಯಲ್ಲಿ ಮಾತನಾಡುತ್ತ ಎಲ್ಲರ ಗಮನ ಸೆಳೆದಿದ್ದಾರೆ.


Spread the love

About Laxminews 24x7

Check Also

ಖಾಸಗಿ ಲಾಡ್ಜ್​​ನಲ್ಲಿ ಪಿಎಸ್​ಐ ಆತ್ಮಹತ್ಯೆ

Spread the love ತುಮಕೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪೊಲೀಸ್​​ ಸಬ್ ಇನ್ಸ್​ಪೆಕ್ಟರ್​​ವೊಬ್ಬರು ನಗರದ ಖಾಸಗಿ ಲಾಡ್ಜ್​​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ