Breaking News
Home / ಜಿಲ್ಲೆ / ಬೆಂಗಳೂರು / ಶಬರಿಮಲೆಗೆ ಹೋಗುವ ಭಕ್ತರಿಗೆ ಮಾರ್ಗಸೂಚಿ

ಶಬರಿಮಲೆಗೆ ಹೋಗುವ ಭಕ್ತರಿಗೆ ಮಾರ್ಗಸೂಚಿ

Spread the love

ಬೆಂಗಳೂರು/ತಿರುವನಂತಪುರಂ: ಶಬರಿ ಮಲೆ ದೇವಸ್ಥಾನಕ್ಕೆ ಹೋಗುವ ಭಕ್ತರಿಗಾಗಿ ಕೇರಳ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಏಳು ಮಾರ್ಗ ಸೂಚಿಗಳನ್ನು ಒಳಗೊಂಡ ಪ್ರಕಟಣೆಯನ್ನು ಧಾರ್ಮಿಕ ದತ್ತಿ ಇಲಾಖೆ ಕನ್ನಡದಲ್ಲೇ  ಬಿಡುಗಡೆ ಮಾಡಿದೆ.

ಶಬರಿಮಲೆ ವೆಬ್ ಸೈಟ್ ನಲ್ಲಿ ನೊಂದಾಯಿಸಿಕೊಂಡು ಅನುಮತಿ ಪಡೆದ ಭಕ್ತರಿಗಷ್ಟೆ ಅವಕಾಶ ನೀಡಲಾಗುತ್ತದೆ. ಪ್ರತಿದಿನ 1 ಸಾವಿರ ಭಕ್ತರಿಗೆ ವಾರಾಂತ್ಯದಲ್ಲಿ 2 ಸಾವಿರ ಭಕ್ತರಿಗೆ ದೇವಸ್ಥಾನ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ದೇವಸ್ಥಾನ ಭೇಟಿಯ 48 ಗಂಟೆ ಅವಧಿಗೆ ಮೊದಲು ಕೋವಿಡ್ ಟೆಸ್ಟ್ ಮಾಡಿಸಿದ ಸರ್ಟಿಫಿಕೇಟ್ ಹೊಂದುವುದು ಕಡ್ಡಾಯ. 10 ವರ್ಷದ ಒಳಗಿನ ಮಕ್ಕಳು 60-65 ವರ್ಷ ಮೇಲ್ಪಟ್ಟ ಹಿರಿಯರು ಹಾಗೂ ಅನಾರೋಗ್ಯದಿಂದ ನಳಲುತ್ತಿರುವವರಿಗೆ ಪ್ರವೇಶ ನಿರಾಕರಣೆ.

ಬಿಪಿಎಲ್ ಕಾರ್ಡ್ ಅಥವಾ ಆಯುಷ್ಮಾನ್ ಕಾರ್ಡ್ ಹೊಂದಿದ್ದರೆ ಅದನ್ನು ಜೊತೆಗೆ ಕೊಂಡೊಯ್ಯಬೇಕು. ತುಪ್ಪದ ಅಭಿಷೇಕ, ಪಂಪಾ ನದಿಯಲ್ಲಿ ಸ್ನಾನ ಹಾಗೂ ರಾತ್ರಿ ಉಳಿದುಕೊಳ್ಳುವುದು ಯಾವುದಕ್ಕೂ ಅವಕಾಶ ಇಲ್ಲ. ಎರುಮೆಲು ಮತ್ತು ವೇದಸಾರಿಕ್ಕರ ಎರಡು ಮಾರ್ಗದಲ್ಲಷ್ಟೆ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.

 


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ