ಹೈದರಾಬಾದ್: ತೆಲಂಗಾಣದಲ್ಲಿ ಮುಖ್ಯಮಂತ್ರಿ ಹಾಗೂ ಬಿಆರ್ಎಸ್ ನಾಯಕ ಕೆ. ಚಂದ್ರಶೇಖರ್ ರಾವ್ ಕಾಮರೆಡ್ಡಿ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ.
ಇದೇ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ಮುನ್ನಡೆ ಸಾಧಿಸಿದ್ದಾರೆ. ಕೋಡಂಗಲ್ ಕ್ಷೇತ್ರದಲ್ಲೂ ಸ್ಪರ್ಧಿಸಿರುವ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಅಲ್ಲೂ ಮುನ್ನಡೆ ಸಾಧಿಸಿದ್ದಾರೆ. ಇದೇ ವೇಳೆ ಮತ್ತೊಂದು ಕ್ಷೇತ್ರ ಗಜ್ವಾಲ್ನಲ್ಲಿ ಸ್ಪರ್ಧಿಸಿರುವ ಮುಖ್ಯಮಂತ್ರಿ ಕೆಸಿಆರ್, ಆ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಮುಖ್ಯಮಂತ್ರಿ ಕೆಸಿಆರ್ ಪುತ್ರ ಕೆ ಟಿ ರಾಮರಾವ್ ಸಿರ್ಸಿಲಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ನಾಯಕ ಭಟ್ಟಿ ವಿಕ್ರಮಾರ್ಕ ಮಲ್ಲು ಅವರು ಮಧಿರ ಕ್ಷೇತ್ರದಲ್ಲಿ ತಮ್ಮ ಪ್ರತಿಸ್ಪರ್ಧಿಗಿಂತ ಮುನ್ನಡೆಯಲ್ಲಿದ್ದಾರೆ.
ಬಿಜೆಪಿ ಪ್ರಮುಖ ನಾಯಕ ಬಂಡಿ ಸಂಜಯ್ ಅವರು ಕರೀಂನಗರ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ.
ಸಿದ್ದಿಪೇಟ್ ಕ್ಷೇತ್ರದಲ್ಲಿ ಬಿಆರ್ಎಸ್ನ ಹರೀಶ್ ರಾವ್ ಮುನ್ನಡೆ ಪಡೆದುಕೊಂಡಿದ್ದಾರೆ.
ಹುಝೂರಾಬಾದ್ ಕ್ಷೇತ್ರದಲ್ಲಿ ಬಿಜೆಪಿ ನಾಯಕ ಈಟಲ ರಾಜೇಂದರ್ ಹಿನ್ನಡೆ ಸಾಧಿಸಿದ್ದಾರೆ. ಮತ್ತೊಂದೆಡೆ ಸ್ಪರ್ಧಿಸಿರುವ ಗಜ್ವಾಲ್ ಕ್ಷೇತ್ರದಲ್ಲಿಯೂ ಹಿನ್ನಡೆ ಸಾಧಿಸಿದ್ದಾರೆ.
ಹುಝೂರ್ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ಉತ್ತಮ್ ಕುಮಾರ್ ರೆಡ್ಡಿ ಮುನ್ನಡೆ ಸಾಧಿಸಿದ್ದಾರೆ.
ಜುಬ್ಲಿಹಿಲ್ಸ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಕ್ರಿಕೆಟಿಗ ಮಹಮ್ಮದ್ ಅಜರುದ್ದೀನ್ ಮುನ್ನಡೆ ಅನುಭವಿಸುತ್ತಿದ್ದಾರೆ.
ರಾಜಸ್ಥಾನ:
ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸರ್ದಾರ್ಪುರ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕ ಸಚಿನ್ ಪೈಲಟ್ ಟೋಂಕ್ ಕ್ಷೇತ್ರದಲ್ಲಿ ಮುನ್ನಡೆ ಅನುಭವಿಸುತ್ತಿದ್ದಾರೆ.
ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಝಾಲರ್ಪಾಠನ್ ಕ್ಷೇತ್ರದಲ್ಲಿ ಪ್ರತಿಸ್ಪರ್ಧಿಗಿಂತ ಮುಂದಿದ್ದಾರೆ.
ಬಿಜೆಪಿ ನಾಯಕ ರಾಜ್ಯವರ್ಧನ್ ರಾಥೋಡ್ ಝೋತ್ವಾರ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ.
ಮಧ್ಯಪ್ರದೇಶ:
ಮಧ್ಯಪ್ರದೇಶದಲ್ಲಿ ಮಾಮಾ ಎಂದೇ ಪ್ರಸಿದ್ಧಿಯಾಗಿರುವ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಬುಧಾನಿ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಇಂದೋರ್ ಕ್ಷೇತ್ರದಲ್ಲಿ ಬಿಜೆಪಿ ನಾಯಕ ಕೈಲಾಶ್ ವಿಜಯ್ ವರ್ಗೀಯಾ ಮುನ್ನಡೆ ಸಾಧಿಸಿದ್ದಾರೆ
ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಕಮಲ್ನಾಥ್ ಚಿಂದ್ವಾರ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ.
ಛತ್ತೀಸ್ಗಢ:
ಛತ್ತೀಸ್ಗಢದಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಪಾಠನ್ ಕ್ಷೇತ್ರದಲ್ಲಿ, ಪ್ರತಿಸ್ಪರ್ಧಿ ಹಾಗೂ ಸಂಬಂಧಿಯಿಂದ ಹಿನ್ನಡೆಯಲ್ಲಿದ್ದಾರೆ.
ಇನ್ನು ಮಾಜಿ ಸಿಎಂ ಹಾಗೂ ಬಿಜೆಪಿ ನೇತಾರ ರಮಣ್ ಸಿಂಗ್ ರಾಜನಂದಗಾಂವ್ ಕ್ಷೇತ್ರದಲ್ಲಿ ಪ್ರತಿಸ್ಪರ್ಧಿಗಿಂತ ಮುನ್ನಡೆ ಸಾಧಿಸಿದ್ದಾರೆ.
ಉಪಮುಖ್ಯಮಂತ್ರಿ ಟಿ.ಎಸ್. ಸಿಂಘ್ ದೇವ್ ಅಂಬಿಕಾಪುರ ಕ್ಷೇತ್ರದಲ್ಲಿ ಹಿನ್ನಡೆ ಕಂಡಿದ್ದಾರೆ.