Breaking News

ಹಾವೇರಿ: 7 ಜೀವಂತ ನಾಡ ಬಾಂಬ್‌ ಪತ್ತೆ, ಆರೋಪಿ ಬಂಧನ

Spread the love

ಹಾವೇರಿ: ಹಾನಗಲ್ ತಾಲೂಕಿನ ಆಡೂರು ಪೊಲೀಸರು ಕಾರ್ಯಾಚರಣೆ ನಡೆಸಿ 7 ಜೀವಂತ ನಾಡ ಬಾಂಬ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಾಡ ಬಾಂಬ್ ಇಟ್ಟಿದ್ದ ಆರೋಪದಡಿ ದುರ್ಗಪ್ಪ ತುರಬಿಗುಡ್ಡ (50) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಕಾಡು ಹಂದಿ ಬೇಟೆಯಾಡುವ ಉದ್ದೇಶದಿಂದ ಕುಸನೂರು ಅರಣ್ಯ ಪ್ರದೇಶದಲ್ಲಿ ಈತ ನಾಡ ಬಾಂಬ್‌ಗಳನ್ನು ಇಟ್ಟಿದ್ದ. ಈ ಸಂಬಂಧ ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

 ಪತ್ತೆಯಾದ 7 ಜೀವಂತ ನಾಡಬಾಂಬ್‌ಪ್ರತ್ಯೇಕ ಪ್ರಕರಣ- ಖಾಸಗಿ ಫೋಟೋ ಸೆರೆಹಿಡಿದು ಬ್ಲ್ಯಾಕ್​ಮೇಲ್ ಮಾಡಿದ ಯುವಕನ ಬಂಧನ: ಇತ್ತೀಚಿಗೆ, ಬಟ್ಟೆ ಅಂಗಡಿಗೆ ಬಂದಿದ್ದ ಯುವತಿಯ ಖಾಸಗಿ ಫೋಟೋ ತೆಗೆದು ಬ್ಲ್ಯಾಕ್​ಮೇಲ್ ಮಾಡಿದ್ದ ಆರೋಪಿಯನ್ನು ಜಿಲ್ಲೆಯ ಹಾನಗಲ್ ಠಾಣೆ ಪೊಲೀಸರು ಬಂಧಿಸಿದ್ದರು. ಮೈನುದ್ದೀನ್ ಮುಂಡಗೋಡ ಬಂಧೀತ ಆರೋಪಿ. ಹಾನಗಲ್ ತಾಲೂಕಿನ ಗ್ರಾಮವೊಂದರ ಯುವತಿ ಬಟ್ಟೆ ಖರೀದಿಗಾಗಿ ಹಾನಗಲ್‌ ಪಟ್ಟಣದಲ್ಲಿನ ಅಂಗಡಿಯೊಂದಕ್ಕೆ ಬಂದಿದ್ದಳು. ಈ ಸಂದರ್ಭದಲ್ಲಿ ಟ್ರಯಲ್ ರೂಮಿನಲ್ಲಿ ಇದ್ದಾಗ ಯುವತಿಯ ಅರಿವಿಗೆ ಬಾರದಂತೆ ಆಕೆಯ ಖಾಸಗಿ ಫೋಟೋವನ್ನು ಆರೋಪಿ ಮೈನುದ್ದೀನ ಸೆರೆಹಿಡಿದಿದ್ದ. ಬಳಿಕ ಯುವತಿಗೆ ಕರೆ ಮಾಡಿ ಬ್ಲ್ಯಾಕ್​ಮೇಲ್​ ಮಾಡಿದ್ದಾನೆ ಎಂದು ದೂರು ನೀಡಲಾಗಿತ್ತು.

ಅಲ್ಲದೇ, ಯುವತಿಯ ಮೊಬೈಲ್‌ ಕರೆ ಮಾಡಿರುವ ಆರೋಪಿ, ಆಕೆಗೆ ನಗ್ನವಾಗಿ ವಿಡಿಯೋ ಕಾಲ್ ಮಾಡುವಂತೆ ಬೆದರಿಸಿ ಕಿರುಕುಳ ನೀಡಿದ್ದಾನೆ. ಜೊತೆಗೆ, ಖಾಸಗಿ ಫೋಟೋ ಇಟ್ಟುಕೊಂಡು ಬ್ಲ್ಯಾಕ್​ಮೇಲ್ ಮಾಡಿರುವ ಯುವಕ, ಯುವತಿ ಕಡೆಯಿಂದ 50 ಸಾವಿರ ರೂ. ಮೌಲ್ಯದ ಚಿನ್ನದ ಸರ ಕಿತ್ತುಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು.


Spread the love

About Laxminews 24x7

Check Also

ಬಿಎಂಐಸಿ ಯೋಜನೆಯನ್ನು ಮರುಪರಿಶೀಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

Spread the loveಬೆಂಗಳೂರು: ಕಳೆದ 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್‌ ಮಾತ್ರ ನಿರ್ಮಾಣಗೊಂಡಿರುವ ಬೆಂಗಳೂರು ಮೈಸೂರು ಮೂಲ ಸೌಕರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ