ಇಂದಿನಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನದ ಸೂಕ್ತ ಸಮಯಕ್ಕೆ ಬರುವ ಶಾಸಕರುಗಳಿಗೆ ಉಡುಗೊರೆ ಕೊಡಲಾಗುತ್ತಿದೆ. ಇನ್ನು ಈ ಬಗ್ಗೆ ಸ್ಪೀಕರ್ ಯುಟಿ ಖಾದರ್ ಮಾತನಾಡಿದ್ದು, ಅದು ಈ ಕೆಳಗಿನಂತಿದೆ,
ಬೆಳಗಾವಿ, (ಡಿಸೆಂಬರ್ 04) : ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ (Belagavi Session)ಇಂದಿನಿಂದ ಆರಂಭವಾಗಲಿದೆ.
ಬೆಳಗ್ಗೆ 11ಗಂಟೆಗೆ ಅಧಿವೇಶನ ಆರಂಭಗೊಳ್ಳಲಿದೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು,ಇತ್ತ ಸುವರ್ಣಸೌಧದ ಹೊರಗೆ, ಪ್ರತಿಭಟನಾ ಸ್ಥಳ ಸೇರಿದಂತೆ ಎಲ್ಲೆಡೆ ಸಿಸಿಟಿವಿ ಕಣ್ಗಾವಲು ಇರಿಸಲಾಗಿದೆ. ಇನ್ನು ಅಧಿವೇಶನಕ್ಕೆ ಸೂಕ್ತ ಸಮಯಕ್ಕೆ ಆಗಮಿಸುವ ಶಾಸಕರುಗಳಿಗೆ ಕಾಫಿ ಕಪ್ ಗಿಫ್ಟ್ (Gift)ಕೊಡಲಾಗುತ್ತಿದೆ. ಈ ಬಗ್ಗೆ ಸ್ವೀಕರ್ ಯುಟಿ ಖಾದರ್ (UT Khadar) ಮಾಹಿತಿ ನೀಡಿದ್ದಾರೆ.