Home / ರಾಜಕೀಯ / ಅರಣ್ಯದಲ್ಲಿ ಶೇ.40ರಷ್ಟು ಕಳೆ, ವನ್ಯಜೀವಿಗಳಿಗೆ ಸಮಸ್ಯೆಯಾಗುತ್ತಿರುವುದು ನಿಜ : ಈಶ್ವರ ಖಂಡ್ರೆ

ಅರಣ್ಯದಲ್ಲಿ ಶೇ.40ರಷ್ಟು ಕಳೆ, ವನ್ಯಜೀವಿಗಳಿಗೆ ಸಮಸ್ಯೆಯಾಗುತ್ತಿರುವುದು ನಿಜ : ಈಶ್ವರ ಖಂಡ್ರೆ

Spread the love

ಬೆಳಗಾವಿ/ಬೆಂಗಳೂರು: ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಕಳೆ ಹೆಚ್ಚಾಗುತ್ತಿರುವುದರಿಂದ ವನ್ಯಜೀವಿಗಳಿಗೆ ಸಮಸ್ಯೆಯಾಗುತ್ತಿದ್ದು, ಕಳೆ ತೆರವು ಮಾಡಿ ವನ್ಯಜೀವಿಗಳ ಸಂಚಾರ ಮತ್ತು ಆಹಾರ ಲಭ್ಯತೆ ಹೆಚ್ಚಿಸಲು ಬೇಕಾದ ಎಲ್ಲ ಕ್ರಮವನ್ನು ಸರ್ಕಾರ ಕೈಗೊಳ್ಳಲಿದೆ.

ಅದೇ ರೀತಿ ಆನೆ ಹಾವಳಿ ತಡೆಗೆ ರೈಲ್ವೆ ಬ್ಯಾರಿಕೇಡ್ ಶಾಶ್ವತ ಪರಿಹಾರವಾಗಿದ್ದು, ಅಗತ್ಯವಿರುವ ಕಡೆ ರೈಲ್ವೆ ಬ್ಯಾರಿಕೇಡ್ ಅಳವಡಿಸಲು ಕ್ರಮವಹಿಸಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯೆ ತೇಜಸ್ವಿನಿಗೌಡ ಪ್ರಶ್ನೆಗೆ ಉತ್ತರಿಸಿದ ಅವರು, ಬಂಡೀಪುರ, ನಾಗರಹೋಳೆ, ಬನ್ನೇರುಘಟ್ಟ ಅರಣ್ಯದಲ್ಲಿ ಕಳೆಯದ್ದು ದೊಡ್ಡ ಸಮಸ್ಯೆ ಇದೆ. ಲಂಟಾನ ನಮ್ಮ ಕಳೆಯಲ್ಲ. ವಿದೇಶದಿಂದ ಬಂದಿದೆ. ಸುಟ್ಟರೂ ಮತ್ತೆ ಬೆಳೆಯುತ್ತಿದೆ. ಈ ಬಗ್ಗೆ ಸಂಶೋಧನೆ ಆಗಿದೆ. ಭೂಮಿಯ ಕೆಳಗೆ ನಾಲ್ಕು ಇಂಚು ಒಳಗಿನಿಂದ ತೆಗೆದುಹಾಕಬೇಕು ಎಂದು ವರದಿ ಕೊಟ್ಟಿದ್ದಾರೆ. ಅರಣ್ಯದಲ್ಲಿ ಶೇ.40-50 ರಷ್ಟು ಕಳೆ ಇರುವ ಕಾರಣ ವನ್ಯಜೀವಿಗಳ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಇದರ ನಿವಾರಣೆಗೆ ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.

5 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ವನ್ಯಜೀವಿಗಳ ಆಹಾರಕ್ಕೆ ಬೇಕಾದ ಗಿಡ ಬೆಳೆಯಲಾಗುತ್ತಿದೆ. 1 ಹೆಕ್ಟೇರ್ ಕಳೆ ತೆರವು ಮಾಡಲು 87 ಸಾವಿರ ರೂ. ಖರ್ಚಾಗಲಿದೆ. ಕಳೆ ತೆಗೆಯಲು ಅನುದಾನ ಕಡಿಮೆ. ಒಟ್ಟಾರೆಯಾಗಿ ಕಳೆ ತೆರವು ಮಾಡಲು 1200 ಕೋಟಿ ರೂ. ಅನುದಾನದ ಅವಶ್ಯಕತೆ ಇದೆ. ಸಿಎಂ ಹಾಗು ಆರ್ಥಿಕ ಇಲಾಖೆ ಜೊತೆ ಚರ್ಚಿಸಿ ಅನುದಾನ ಹೆಚ್ಚಿಸಲು ಕ್ರಮ ವಹಿಸಲಾಗುತ್ತದೆ. ಆದ್ಯತೆ ಮೇರೆಗೆ ಕಳೆ ತೆಗೆಯಲು ಕ್ರಮ ವಹಿಸಿ ವನ್ಯಜೀವಿಗಳ ಮೇವಿಗೆ ಬೇಕಾದ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಸದ್ಯ 7 ಆನೆ ಕಾರ್ಯಪಡೆ ರಚಿಸಿದ್ದೇವೆ. ಹೊರಗುತ್ತಿಗೆ ಆಧಾರದಲ್ಲಿ ಮತ್ತು ನಮ್ಮ ಸಿಬ್ಬಂದಿ ಸೇರಿ ಕೆಲಸ ಮಾಡುತ್ತಿದ್ದಾರೆ. ಕಾರ್ಯಪಡೆಯಲ್ಲಿ ಕೆಲಸ ಮಾಡುವ ವ್ಯಕ್ತಿ ಆನೆ ತುಳಿತದಿಂದ ಮೃತಪಟ್ಟ ಘಟನೆ ನಡೆದಿದೆ. ಹಾಗಾಗಿ ಹೆಚ್ಚಿನ ತರಬೇತಿಗೆ ಕ್ರಮ ವಹಿಸಲಾಗಿದೆ. ಆನೆ ಹಾವಳಿ ತಡೆಗೆ ರೈಲ್ವೆ ಬ್ಯಾರಿಕೇಡ್, ಆನೆ ಕಂದಕ ನಿರ್ಮಾಣ ಮಾಡುತ್ತಿದ್ದೇವೆ. ಸೌರಶಕ್ತಿ ಬೇಲಿ ನಿರ್ಮಿಸಲಾಗುತ್ತಿದೆ. ಆದರೂ ರೈಲ್ವೆ ಬ್ಯಾರಿಕೇಡ್ ಶಾಶ್ವತ ಪರಿಹಾರವಾಗಿದೆ. ಇದಕ್ಕೆ ಹೆಚ್ಚಿನ ಅನುದಾನ ಬೇಕಿದೆ. ಒಂದು ಕಿಲೋಮೀಟರ್​ಗೆ 1.5 ಕೋಟಿ ಅನುದಾನ ಬೇಕಿದೆ. ಎಲ್ಲೆಲ್ಲಿ ರೈಲ್ವೆ ಬ್ಯಾರಿಕೇಡ್ ಪ್ರಸ್ತಾವನೆ ಬರುತ್ತದೆಯೋ ಆದ್ಯತೆ ಮೇರೆಗೆ ಕ್ರಮ ವಹಿಸಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ