Breaking News
Home / ಜಿಲ್ಲೆ / ಬೆಳಗಾವಿ / ನಿಪ್ಪಾಣಿ / ನಿಪ್ಪಾಣಿ: ‘ನಗರಕ್ಕೆ ಕುಡಿಯುವ ನೀರು ಸರಬರಾಜು ಕಾಮಗಾರಿಗೆ ಕೇಂದ್ರ ಸರ್ಕಾರ ಪುರಸ್ಕೃತ ಅಮೃತ 2.0 ಯೋಜನೆಯಡಿ ₹ 30.83 ಕೋಟಿ: ಜೊಲ್ಲೆ

ನಿಪ್ಪಾಣಿ: ‘ನಗರಕ್ಕೆ ಕುಡಿಯುವ ನೀರು ಸರಬರಾಜು ಕಾಮಗಾರಿಗೆ ಕೇಂದ್ರ ಸರ್ಕಾರ ಪುರಸ್ಕೃತ ಅಮೃತ 2.0 ಯೋಜನೆಯಡಿ ₹ 30.83 ಕೋಟಿ: ಜೊಲ್ಲೆ

Spread the love

ನಿಪ್ಪಾಣಿ: ‘ನಗರಕ್ಕೆ ಕುಡಿಯುವ ನೀರು ಸರಬರಾಜು ಕಾಮಗಾರಿಗೆ ಕೇಂದ್ರ ಸರ್ಕಾರ ಪುರಸ್ಕೃತ ಅಮೃತ 2.0 ಯೋಜನೆಯಡಿ ₹ 30.83 ಕೋಟಿ ಪ್ರಸ್ತಾವಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಶೀಘ್ರದಲ್ಲಿ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುವುದು’ ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು.

 

 ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಯೋಜನೆಯನ್ನು ನಗರದ ಮುಂದಿನ 50 ವರ್ಷಗಳ ಕಾಲಾವಧಿಯ ಜನಸಂಖ್ಯೆಯ ಆಧಾರದ ಮೇಲೆ ಲೆಕ್ಕಾಚಾರ ಮಾಡಿ ರೂಪುರೇಷೆ ಸಿದ್ಧಪಡಿಸಿ ಕಾಮಗಾರಿಯ ವಿಸ್ತೃತ ಯೋಜನಾ ವರದಿಯನ್ನು (ಡಿಪಿಆರ್) ಸಿದ್ಧಪಡಿಸಲಾಗಿತ್ತು’ ಎಂದರು.

‘ರಾಜ್ಯ ಸರ್ಕಾರದ ಕರ್ನಾಟಕ ನಗರ ನೀರು ಸರಬರಾಜು ಹಾಗು ಒಳಚರಂಡಿ ಮಂಡಳಿ ಇಲಾಖೆಯಿಂದ ಅನುಷ್ಠಾನಗೊಳ್ಳಲಿರುವ ಈ ಯೋಜನೆಗೆ ಕೇಂದ್ರ ಸರ್ಕಾರದಿಂದ ಶೇ 50, ರಾಜ್ಯ ಸರ್ಕಾರದಿಂದ ಶೇ 40 ಹಾಗೂ ಸ್ಥಳೀಯ ನಗರಸಭೆಯಿಂದ ಶೇ 10 ರಷ್ಟು ಅನುದಾನ ದೊರೆಯಲಿದೆ. ವೇದಗಂಗಾ ನದಿಯ ದಡದಲ್ಲಿ 12 ಮೀ. ಸುತ್ತಳತೆಯ ಆರ್‌ಸಿಸಿ ಜಾಕವೆಲ್ ಕಮ್ ಪಂಪಹೌಸ್‌ ನಿರ್ಮಾಣ, 8×8 ಮೀಟರ್ ಟಿಸಿ ಪ್ಲಾಟ್‌ಫಾರ್ಮ್‌, 5 ಮೀ. ಅಗಲ 30 ಮೀ. ಉದ್ದದ ಕಾಲುಸೇತುವೆ ನಿರ್ಮಿಸಲಾಗುವುದು. ಈ ಜಾಕವೆಲ್‌ದಿಂದ ಜವಾಹರ ಜಲಾಶಯದವರೆಗೆ 7.7 ಕಿ.ಮೀ. ಉದ್ದದ ಪೈಪಲೈನ್ ನಿರ್ಮಾಣ ಮತ್ತು ಅಗೆದ ರಸ್ತೆ ಮರುನಿರ್ಮಾಣ ಕಾಮಗಾರಿ ಒಳಗೊಂಡಿದೆ. ಜತೆಗೆ ವಲಯ-1 ರಲ್ಲಿ 10 ಲಕ್ಷ ಲೀ. ಕ್ಷಮತೆಯ ಮೇಲ್ಮಟ್ಟದ ಜಲಸಂಗ್ರಹಾಲಯ (ಓಎಚ್‌ಟಿ) ಮತ್ತು ವಲಯ-2 ರಲ್ಲಿ ರಲ್ಲಿ 5 ಲಕ್ಷ ಲೀ. ಕ್ಷಮತೆಯ ಮೇಲ್ಮಟ್ಟದ ಜಲಸಂಗ್ರಹಾಲಯ (ಓಎಚ್‌ಟಿ)ಗಳನ್ನು ನಿರ್ಮಿಸಲಾಗುವುದು. ಮನೆಗೆ ಶುದ್ಧ ಕುಡಿಯುವ ನೀರು ಸರಬರಾಜು ಯೋಜನೆಯಲ್ಲಿ ಯಾವುದೇ ಕೊರತೆಗಳಾಗದಂತೆ ಅನುಷ್ಠಾನಗೊಳಿಸಲಾಗುವುದು’ ಎಂದರು.

ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯ ಸಂಚಾಲಕ ಮಹಾಲಿಂಗ ಕೋಠಿವಾಲೆ, ರಾಜೇಂದ್ರ ಗುಂದೆಶಾ, ನಗರಸಭೆ ಮಾಜಿ ಉಪಾಧ್ಯಕ್ಷ ಸುನೀಲ ಪಾಟೀಲ, ನೀತಾ ಬಾಗಡೆ ಇದ್ದರು.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಕರವೇ ಬೃಹತ್ ಪ್ರತಿಭಟನೆ: ಕುಂದಾನಗರಿಯಲ್ಲಿ ಪೊಲೀಸ್ ಸರ್ಪಗಾವಲು

Spread the loveಮಹಾರಾಷ್ಟ್ರದಿಂದ ಬೆಳಗಾವಿ ಪ್ರವೇಶ ಮಾಡುವ ಎಲ್ಲ ಚೆಕ್​ ಪೋಸ್ಟ್​ಗಳಲ್ಲೂ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ. ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ