Breaking News

ಕಾಂಗ್ರೆಸ್ ಪಕ್ಷ​ ಅಧಿಕಾರಕ್ಕೆ ಬಂದಾಗಲೆಲ್ಲ ಗೂಂಡಾ ಪ್ರವೃತ್ತಿ ತೋರಿಸುತ್ತಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ

Spread the love

ಬೆಳಗಾವಿ: “ಕಾಂಗ್ರೆಸ್​ ಗೂಂಡಾ ಸಂಸ್ಕೃತಿಯನ್ನು ಹೊಂದಿದೆ.

ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂಗಳ ಮೇಲೆ ದೌರ್ಜನ್ಯ ನಡೆದಿದೆ” ಎಂದು ವಿಪಕ್ಷ ನಾಯಕ ಆರ್​.ಅಶೋಕ್ ಆರೋಪಿಸಿದರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತ ಪೃಥ್ವಿ ಸಿಂಗ್ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಈ ಹಿಂದೆ 2013ರಿಂದ 2018ರವರೆಗೆ ಸಿದ್ದರಾಮಯ್ಯನವರ ಸರ್ಕಾರ ಇದ್ದಾಗ ಸುಮಾರು 25ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಕೊಲೆಯಾಗಿತ್ತು” ಎಂದರು.

 ಪೃಥ್ವಿ ಸಿಂಗ್ ಆರೋಗ್ಯ ವಿಚಾರಿಸಿದ ಆರ್​. ಅಶೋಕ್“ಈಗ ಅಧಿಕಾರಕ್ಕೆ ಬಂದ 6 ತಿಂಗಳಲ್ಲಿ ಕಲಬುರಗಿ, ಬೆಳಗಾವಿಯಲ್ಲಿ ಇದೇ ರೀತಿ ಆಗಿದೆ. ಮಂಗಳೂರು, ಉಡುಪಿಯಲ್ಲಿ ನಮ್ಮ ಇಬ್ಬರು ಹಿಂದೂ ಕಾರ್ಯಕರ್ತರನ್ನು ಪೊಲೀಸರನ್ನು ದುರ್ಬಳಕೆ ಮಾಡಿಕೊಂಡು ಗಡಿಪಾರು ಮಾಡಿಸಿದ್ದಾರೆ. ಕಾಂಗ್ರೆಸ್​ ಅಧಿಕಾರಕ್ಕೆ ಬಂದಾಗ ಈ ರೀತಿ ಗೂಂಡಾ ಪ್ರವೃತ್ತಿಯನ್ನು ತೋರಿಸುತ್ತಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಅವರ ಗೂಂಡಾಗಿರಿ, ದೌರ್ಜನ್ಯಕ್ಕೆ ಬಿಜೆಪಿ ಬಗ್ಗಲ್ಲ. ವಿಧಾನಸಭೆಯಲ್ಲಿ ಈ ಎಲ್ಲಾ ವಿಚಾರಗಳನ್ನು ಪ್ರಸ್ತಾಪ ಮಾಡಿ ನಮ್ಮ ಕಾರ್ಯಕರ್ತರನ್ನು ರಕ್ಷಣೆ ಮಾಡುತ್ತೇವೆ” ಎಂದು ಹೇಳಿದರು.

“ಪೊಲೀಸರು ಕಾಟಾಚಾರದ ಕೇಸ್ ಹಾಕಿದ್ದಾರೆ. ಕೊಲೆ ಯತ್ನ ಮತ್ತು ಮೊಬೈಲ್ ಕಿತ್ತುಕೊಂಡಿದ್ದಕ್ಕೆ ದರೋಡೆ ಕೇಸ್ ಹಾಕಿಲ್ಲ. ಪೊಲೀಸರ ಮೇಲೆ ಮಂತ್ರಿಗಳು ಒತ್ತಡ ಹಾಕುತ್ತಿದ್ದಾರೆ. ಇದರ ಬಗ್ಗೆಯೂ ಸದನದಲ್ಲಿ ಚರ್ಚೆ ಮಾಡುತ್ತೇವೆ. ಪೊಲೀಸರಿಗೆ ನಾನು ಎಚ್ಚರಿಕೆ ಕೊಡುತ್ತಿದ್ದೇನೆ. ಈ ಸರ್ಕಾರವೇ ಪರ್ಮನೆಂಟ್​ ಎಂದು ತಿಳಿದುಕೊಳ್ಳಬೇಡಿ. ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಇವು ಇದೇ ಸರ್ಕಾರದ ಪರವಾಗಿ ಕೆಲಸ ಮಾಡಿದರೆ ಮುಂದಿನ ದಿನಗಳಲ್ಲಿ ಇದರ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಸಿದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ