Breaking News

ಅಬಕಾರಿ ಸಿಎಲ್ 7 ಪರವಾನಗಿ ಅಕ್ರಮ: ಆಡಳಿತ-ಪ್ರತಿಪಕ್ಷಗಳ ಸದಸ್ಯರ ನಡುವೆ ಆರೋಪ-ಪ್ರತ್ಯಾರೋಪ

Spread the love

ಬೆಳಗಾವಿ/ ಬೆಂಗಳೂರು : ರಾಜ್ಯದ ಹಲವು ಕಡೆ ಅಬಕಾರಿ ಇಲಾಖೆಯಲ್ಲಿನ ಸಿಎಲ್ -7 ಪರವಾನಗಿಯಲ್ಲಿ ಅಕ್ರಮ ನಡೆದಿದ್ದು, ಇದರ ಬಗ್ಗೆ ತನಿಖೆಯಾಗಬೇಕೆಂಬ ವಿಚಾರ ವಿಧಾನಸಭೆಯಲ್ಲಿ ಇಂದು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ವಾಗ್ವಾದ ನಡೆಯಿತು.

ಪ್ರಶ್ನೋತ್ತರ ವೇಳೆ ಕಾಂಗ್ರೆಸ್ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಅವರು, ಸಿಎಲ್ 7 ಪರವಾನಗಿಯಲ್ಲಿ ಅಕ್ರಮ ನಡೆದಿದೆ. ನಿಯಮಗಳನ್ನು ಗಾಳಿಗೆ ತೂರಿ ಪರವಾನಗಿ ನೀಡಲಾಗಿದೆ ಎಂದು ಸದನದಲ್ಲಿ ಪ್ರಸ್ತಾಪಿಸಿದರು. ಕೋಲಾರ ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯ ರಂಗಪ್ಪ ಎಂಬ ಅಧಿಕಾರಿ ನಿಯಮಗಳನ್ನು ಗಾಳಿಗೆ ತೂರಿ ಸಿಎಲ್ 7 ಎಲ್ಲ ಬಾರ್​ಗಳಿಗೂ ಪಾಲುದಾರರಾಗಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಸಿಎಲ್ 7 ಪರವಾನಗಿ ಅಕ್ರಮದ ಬಗ್ಗೆ ತನಿಖೆ ನಡೆಸಬೇಕೆಂದು ಶಾಸಕರು ಒತ್ತಾಯಿಸಿದರು.

ಇದೇ ವೇಳೆ ಆಡಳಿತ ಪಕ್ಷದ ಸದಸ್ಯರಾದ ಶಿವಲಿಂಗೇಗೌಡ, ಬೇಳೂರು ಗೋಪಾಲಕೃಷ್ಣ, ನಂಜೇಗೌಡ, ನರೇಂದ್ರಸ್ವಾಮಿ ಮತ್ತಿತರರು ದನಿಗೂಡಿಸಿ ಸಿಎಲ್ 7 ಪರವಾನಗಿಯನ್ನು ಬೇಕಾಬಿಟ್ಟಿ ಕೊಡಲಾಗಿದೆ. ಇದು ಹಿಂದಿನ ಬಿಜೆಪಿ ಸರ್ಕಾರದಲ್ಲಿ ಆಗಿರುವ ಅಕ್ರಮವಾಗಿದ್ದು, ತನಿಖೆಗೆ ಪಟ್ಟುಹಿಡಿದರು. ಈ ಸಂದರ್ಭದಲ್ಲಿ ಎದ್ದುನಿಂತ ಮಾಜಿ ಸಚಿವ ಗೋಪಾಲಯ್ಯ ಅವರು, ನಿಮಗೆ ಧೈರ್ಯ, ತಾಕತ್ತು ಇದ್ದರೆ ಸಿಎಲ್ 7 ಪರವಾನಗಿ ಅಕ್ರಮದ ಬಗ್ಗೆ ತನಿಖೆ ನಡೆಸಿ, ಪರವಾನಗಿ ರದ್ದು ಮಾಡಿ ಎಂದು ಆಗ್ರಹಿಸಿದರು. ಇದರಿಂದ ಸಿಟ್ಟಿಗೆದ್ದ ಆಡಳಿತ ಪಕ್ಷದ ಸದಸ್ಯರು, ಬಿಜೆಪಿ ಶಾಸಕರ ಮೇಲೆ ಮುಗಿಬಿದ್ದರು.

ಆರೋಪ – ಪ್ರತ್ಯಾರೋಪಗಳು ನಡೆದು ಸದನದಲ್ಲಿ ಗದ್ದಲದ ವಾತಾವರಣ ಉಂಟಾಯಿತು. ಆಗ ಎರಡೂ ಕಡೆಯವರನ್ನು ಸ್ಪೀಕರ್ ಯು ಟಿ ಖಾದರ್ ಸಮಾಧಾನಪಡಿಸಿದರು. ನಂತರ ಇದಕ್ಕೆ ಉತ್ತರ ನೀಡಿದ ಅಬಕಾರಿ ಸಚಿವ ಆರ್. ಬಿ ತಿಮ್ಮಾಪುರ ಅವರು, ಸಿಎಲ್ 7 ಪರವಾನಗಿ ಸಂದರ್ಭದಲ್ಲಿ ಕಟ್ಟಡ ವಿನ್ಯಾಸ ಮತ್ತು ವಾಹನದ ನಿಲುಗಡೆ ವಿಸ್ತೀರ್ಣದ ಬಗ್ಗೆ ನಿಯಮಗಳಿಲ್ಲ. ಈ ನಿಯಮಗಳನ್ನು ರೂಪಿಸಿ ಸಿಎಲ್ 7 ಪರವಾನಗಿ, ಸನ್ನದ್ದುಗಳ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದರು.

ಚಕಮಕಿ, ಗದ್ದಲದ ವಾತಾವರಣ: ಇನ್ನು ಕೋಲಾರದ ಅಬಕಾರಿ ಇಲಾಖೆ ಅಧಿಕಾರಿ ವಿರುದ್ಧ ಕೇಳಿಬಂದಿರುವ ಆರೋಪಗಳ ಬಗ್ಗೆ ಮಾಹಿತಿ ತರಿಸಿಕೊಂಡು ತಪ್ಪಿತಸ್ಥರೆಂದು ಕಂಡುಬಂದರೆ, ಅವರ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಸಚಿವರ ಮಾತಿಗೆ ಒಪ್ಪದ ಆಡಳಿತ ಪಕ್ಷದ ಸದಸ್ಯರು ಈ ಕುರಿತು ತನಿಖೆಯಾಗಲೇಬೇಕು, ತನಿಖೆ ಮಾಡಿ ಎಂದು ಒತ್ತಾಯಿಸಿದರು. ಆಗ ಮತ್ತೆ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ, ಗದ್ದಲದ ವಾತಾವರಣ ಉಂಟಾಯಿತು.

ಈ ಗದ್ದಲದ ಮಧ್ಯೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು, ಸಿಎಲ್ 7 ಪರವಾನಗಿಯಲ್ಲಿ ಅಕ್ರಮಗಳಾಗಿರುವ ಬಗ್ಗೆ ಸದಸ್ಯರು ಪ್ರಸ್ತಾಪಿಸಿದ್ದಾರೆ. ಇದು ಯಾವ ಸರ್ಕಾರದಲ್ಲಾದರೂ ಆಗಿರಲಿ, ತನಿಖೆ ನಡೆಸಿ, ಅಕ್ರಮವಾಗಿದ್ದರೆ ಆ ಪರವಾನಗಿಯನ್ನು ರದ್ದು ಮಾಡಿ ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ