Breaking News

ಯತ್ನಾಳ, ಮೌಲ್ವಿ ಕುಟುಂಬ ಉದ್ಯಮದ ಪಾಲುದಾರರು: ಅಕ್ಕಪಕ್ಕದ ಮನೆಗಳಲ್ಲೇ ವಾಸ

Spread the love

ವಿಜಯಪುರ: ‘ಐಸಿಸ್‌ ಭಯೋತ್ಪಾದಕರೊಂದಿಗೆ ನಂಟಿದೆ’ ಎಂದು ಆರೋಪಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತು ಆರೋಪಕ್ಕೆ ಒಳಗಾಗಿರುವ ಜಮಾತ್‌ ಎ ಅಹಲೆ ಸುನ್ನತ್‌ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರೂ ಆದ ಮೌಲ್ವಿ ತನ್ವೀರ್‌ ಹಾಶ್ಮಿ ಅವರು ಇಲ್ಲಿನ ಗಾಂಧಿಚೌಕದ ಬಳಿಯಿರುವ ‘ಟೂರಿಸ್ಟ್‌ ಹೋಟೆಲ್‌’ನ ಪಾಲುದಾರರು.

 

ಅಷ್ಟೇ ಅಲ್ಲ, ನಗರದ ಹೊರವಲಯದ ಮಹಲ್‌ ಐನಾಪುರ ಗ್ರಾಮದಲ್ಲಿ ಹಾದು ಹೋಗಿರುವ ವಿಜಯಪುರ-ಕಲಬುರಗಿ ರಾಷ್ಟ್ರೀಯ ಹೆದ್ದಾರಿ ಬಳಿ ಅವರಿಬ್ಬರ ಮನೆಗಳು, ವಾಣಿಜ್ಯ ಮಳಿಗೆಗಳು ಅಕ್ಕಪಕ್ಕದಲ್ಲಿವೆ. ಆದರೆ, ಈಗ ಒಮ್ಮೆಲೇ ಯಾಕೆ ಇಬ್ಬರಲ್ಲಿ ವೈಮನಸ್ಸು ಮೂಡಿದೆ ಎಂಬುದರ ಬಗ್ಗೆ ರಾಜಕೀಯ ವಲಯದಲ್ಲಿ ವ್ಯಾಪಕವಾಗಿ ಚರ್ಚೆ ನಡೆದಿದೆ.

ಇದೇ ವಿಷಯದ ಕುರಿತು ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ ಗಣಿಹಾರ ಅವರು, ‘ಟೂರಿಸ್ಟ್‌ ಹೋಟೆಲ್‌ನಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತು ಮೌಲ್ವಿ ತನ್ವೀರ್‌ ಹಾಶ್ಮಿ ಅವರ ಕುಟುಂಬದವರು ಪಾಲುದಾರರು. ಹೀಗಿರುವಾಗ ಮೌಲ್ವಿ ವಿರುದ್ಧ ಆರೋಪಿಸುವ ನೈತಿಕತೆ ಯತ್ನಾಳರಿಗೆ ಇದೆಯೇ’ ಎಂದು ಪ್ರಶ್ನಿಸಿದ್ದಾರೆ.

‘ಮೌಲ್ವಿಯವರು ಐಸಿಸ್‌ ಜೊತೆ ನಂಟು ಹೊಂದಿದ್ದಾರೆ ಎಂಬುದು ಗೊತ್ತಿದ್ದಿದ್ದರೆ, ಇಷ್ಟು ವರ್ಷ ಏಕೆ ಸುಮ್ಮನಿದ್ದರು? ಅವರು ಆರೋಪ ಸಾಬೀತು ಪಡಿಸಬೇಕು, ಇಲ್ಲವೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ರಾಜ್ಯ ಸರ್ಕಾರವು ಅವರ ವಿರುದ್ಧ ಕ್ರಮ ಜರುಗಿಸಿ, ಗಡಿಪಾರು ಮಾಡಬೇಕು’ ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ