Breaking News

ಹಣದ ಬದಲು ಅಕ್ಕಿ ವಿತರಿಸಲು ಕ್ರಮ:K.H. ಮುನಿಯಪ್ಪ

Spread the love

ಬೆಳಗಾವಿ/ ಬೆಂಗಳೂರು : ಆಹಾರ ಭದ್ರತೆಯಡಿ ಪಡಿತರದಾರರಿಗೆ ಕೇಂದ್ರದ 5 ಕೆ ಜಿ ಆಹಾರ ಧಾನ್ಯ ವಿತರಣೆ ಜೊತೆ ರಾಜ್ಯದಿಂದ ಪೂರೈಸಬೇಕಿದ್ದ 5 ಕೆ ಜಿ ಅಕ್ಕಿ ಬದಲು ನೀಡಲಾಗುತ್ತಿರುವ ಹಣವನ್ನು ಹೆಚ್ಚು ಮಾಡುವುದಿಲ್ಲ.

ಕೇಂದ್ರ ಆಹಾರ ನಿಗಮ ನಿಗದಿಪಡಿಸಿದ ಹಣವನ್ನೇ ನಾವು ಫಲಾನುಭವಿಗಳ ಖಾತೆಗೆ ನೀಡುತ್ತಿದ್ದೇವೆ. ಆದಷ್ಟು ಬೇಗ ಹಣದ ಬದಲು ಅಕ್ಕಿಯನ್ನೇ ವಿತರಿಸಲು ಕ್ರಮ ವಹಿಸಲಾಗುತ್ತದೆ ಎಂದು ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಅವರು ಭರವಸೆ ನೀಡಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಕೇಶವಪ್ರಸಾದ್ ಬದಲು ತಳವಾರ ಸಾಬಣ್ಣ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರದಿಂದ ಪಡಿತರದಾರರಿಗೆ ನೀಡುತ್ತಿದ್ದ 5 ಕೆಜಿ ಅಕ್ಕಿ, ರಾಜ್ಯದಿಂದ ನೀಡಬೇಕಿದ್ದ 5 ಕೆಜಿ ಅಕ್ಕಿ ಬದಲು ತಲಾ ಕೆಜಿಗೆ 34 ರೂ. ನೀಡಲಾಗುತ್ತಿದೆ. ಆಹಾರ ನಿಗಮ ನಿಗದಿಪಡಿಸಿದ ಹಣವನ್ನೇ ನಾವು ಕೊಡುತ್ತಿದ್ದೇವೆ. ಅದನ್ನು ಮಾರುಕಟ್ಟೆ ದರದಲ್ಲಿ ಅಕ್ಕಿ ದರ ಹೆಚ್ಚಿದೆ ಎನ್ನುವ ಕಾರಣಕ್ಕೆ ನಾವು ಹೆಚ್ಚು ಮಾಡಲು ಸಾಧ್ಯವಿಲ್ಲ. ಆದರೂ ನಾವು ಹಣದ ಬದಲು ಅಕ್ಕಿಯನ್ನೇ ನೀಡಲು ಚಿಂತನೆ ಮಾಡಿದ್ದೇವೆ. ಕೇಂದ್ರದ ಜೊತೆ ಮಾತುಕತೆ ನಡೆಸುತ್ತಿದ್ದು, ಅಕ್ಕಿ ದರ ಕಡಿತಕ್ಕೆ ಮನವಿ ಮಾಡಲಾಗಿದೆ ಎಂದು ಹೇಳಿದರು.

ಹೊಸ ಪಡಿತರ ಕಾರ್ಡ್​ಗಳ ವಿತರಣೆಗೆ ಸರ್ವರ್ ಸಮಸ್ಯೆ ಇದೆ. ಆದರೆ ಅದನ್ನು ಪರಿಹರಿಸುವ ಕಾರ್ಯ ಬಹುತೇಕ ಸಫಲವಾಗಿದೆ. ಒಂದು ತಿಂಗಳಿನಿಂದ ಸಮಸ್ಯೆ ಕಡಿಮೆಯಾಗಿದೆ. ಅಲ್ಪ ಸಮಸ್ಯೆ ಮಾತ್ರ ಉಳಿದಿದೆ. ಅದನ್ನೂ ಆದಷ್ಟು ಶೀಘ್ರ ಸರಿಪಡಿಸಲಾಗುತ್ತದೆ. 


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ