Breaking News

”ಸಕ್ಕರೆ ಕಾರ್ಖಾನೆಗಳಲ್ಲಿ ತೂಕದ ಯಂತ್ರ ಡಿಜಿಟಲೀಕರಣಗೊಳಿಸಲು ಸರ್ಕಾರ ಸೂಚನೆ ನೀಡಿದೆ”

Spread the love

ಬೆಳಗಾವಿ: ”ಕಬ್ಬಿನ ತೂಕದಲ್ಲಿ ಆಗುತ್ತಿರುವ ಮೋಸವನ್ನು ನಿಯಂತ್ರಿಸಲು ರಾಜ್ಯದ ಸಕ್ಕರೆ ಕಾರ್ಖಾನೆಗಳಲ್ಲಿನ ತೂಕದ ಯಂತ್ರಗಳ ಡಿಜಿಟಲೀಕರಣಕ್ಕೆ ಸರ್ಕಾರ ಸೂಚನೆ ನೀಡಿದೆ.

ಈ ಸಂಬಂಧ ಕಾರ್ಖಾನೆಗಳ ಮಾಲೀಕರಿಗೆ 15 ದಿನಗಳ ಗಡುವು ನೀಡಲಾಗಿದೆ” ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ ಹೆಚ್ ಮುನಿಯಪ್ಪ ತಿಳಿಸಿದರು.

ಸುವರ್ಣಸೌಧಲ್ಲಿ ಮಂಗಳವಾರ ಸಚಿವ ಶಿವಾನಂದ ಪಾಟೀಲ್, ಶಾಸಕ ಲಕ್ಷ್ಮಣ ಸವದಿ ಸೇರಿದಂತೆ ಕಬ್ಬು ಬೆಳೆಯುವ ಪ್ರದೇಶಗಳ ವ್ಯಾಪ್ತಿಯ ಜನಪ್ರತಿನಿಧಿಗಳು, ಕಾನೂನು ಮಾಪನಶಾಸ್ತ್ರ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ಪ್ರಸಕ್ತ ಹಂಗಾಮಿನಲ್ಲಿ 78 ಸಕ್ಕರೆ ಕಾರ್ಖಾನೆಗಳು ಕಬ್ಬು ಅರೆಯುತ್ತಿವೆ. ಇದರಲ್ಲಿ 24 ಮಾತ್ರ ಡಿಜಿಟಲ್ ತೂಕದ ಯಂತ್ರಗಳನ್ನು ಅಳವಡಿಸಿಕೊಂಡಿದ್ದು, ಉಳಿದ 54 ಕಾರ್ಖಾನೆಗಳು ಮುಂದಿನ ಹದಿನೈದು ದಿನಗಳಲ್ಲಿ ಡಿಜಿಟಲ್‌ಗೆ ಪರಿವರ್ತನೆ ಆಗಬೇಕು” ಎಂದು ತಿಳಿಸಿದರು.


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ