Breaking News

ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಅವರ ಮಾತು ಕೇಳಿ ಬಿದ್ದು ಬಿದ್ದ ನಕ್ಕ ಸಂತೋಷ ಲಾಡ್

Spread the love

ಬೆಳಗಾವಿ : ವಿವಿಧ ಸಂಘ ಸಂಸ್ಥೆಗಳು ತಮ್ಮ ಬೇಡಿಕೆ ಈಡೇರಿಸುವಂತೆ ಕಳೆದ 9 ದಿನಗಳಿಂದ ಬೆಳಗಾವಿಯ ಸುವರ್ಣ ಗಾರ್ಡನ್​ ಬಳಿಯ ಟೆಂಟ್​ನಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆಯುತ್ತಿವೆ. ಇಂದು ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಪ್ರತಿಭಟನಾಕಾರರು ವಿವಿಧ ಬೇಡಿಕೆ ಮುಂದಿಟ್ಟರು.

ಕಾರ್ಮಿಕ ಮಂಡಳಿಯ ಅಡಿ ಮಧ್ಯಪಾನ ಪ್ರಿಯರ ಕಲ್ಯಾಣ ನಿಧಿ ಸ್ಥಾಪಿಸಬೇಕು. ವಾರ್ಷಿಕ ಆದಾಯದಲ್ಲಿ ಶೇ.10ರಷ್ಟು ಕಲ್ಯಾಣ ನಿಧಿಗೆ ವರ್ಗಾಯಿಸಬೇಕು. ಮಧ್ಯಪಾನ ಪ್ರಿಯರ ಪ್ರತಿಭಾನ್ವಿತ ಮಕ್ಕಳಿಗೆ ಮಾಸಾಶನ ನೀಡಬೇಕು. ಮದ್ಯಪಾನ ಪ್ರಿಯರು ಅನಾರೋಗ್ಯಕ್ಕೆ ತುತ್ತಾದಲ್ಲಿ ವೈದ್ಯಕೀಯ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸುವುದು ಸೇರಿ‌ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಿದರು.

ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಕಾರ್ಮಿಕ ಸಚಿವ ಸಂತೋಷ್​ ಲಾಡ್ ಆಗಮಿಸಿ ಮದ್ಯ ಪ್ರಿಯರ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ಪ್ರತಿಭಟನಾಕಾರರು ಸಚಿವರಲ್ಲಿ, ನಮಗೆ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪಿಸಬೇಕು. ಇತರ ಸಾಲ ಸೌಲಭ್ಯ ಹಾಗೂ ವಸತಿ ಸೌಲಭ್ಯ ಒದಗಿಸಬೇಕು. ಮದ್ಯ ಸೇವಿಸಿ‌ ಮೃತ ಪಟ್ಟರೆ 10 ಲಕ್ಷ ರೂ. ವಿಮಾ‌ ಸೌಲಭ್ಯ ನೀಡಬೇಕು.‌ ಮದುವೆ ಆಗಲು 2 ಲಕ್ಷ ರೂ.‌ಪ್ರೋತ್ಸಾಹ ಧನ ವಿತರಿಸಬೇಕು. ದರ ಹೆಚ್ಚಿಸುವ ವೇಳೆ ನಮ್ಮ‌ ಸಂಘವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಎಂಆರ್ ಪಿ ದರದಂತೆ ಮದ್ಯ ಮಾರಾಟ ಮಾಡುವಂತೆ ಅಬಕಾರಿ ಅಧಿಕಾರಿಗಳಿಗೆ ಸೂಚಿಸುವಂತೆ ಒತ್ತಾಯಿಸಿದರು.

ಇದಕ್ಕೂ‌ ಮೊದಲು ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ವೆಂಕಟೇಶ್​ ಗೌಡ ಬೋರೇಹಳ್ಳಿ, ಒಂದು ವರ್ಷದ ಹಿಂದೆ ಸಂಘ ಸ್ಥಾಪಿಸಿದ್ದು, ಒಟ್ಟು 3 ರಿಂದ 4 ಸಾವಿರ ಸದಸ್ಯರಿದ್ದಾರೆ. ನಮ್ಮನ್ನು ಕುಡುಕರು ಎಂದು ಕರೆದು ಅವಮಾನ ಮಾಡದೇ ಮದ್ಯಪ್ರಿಯರು ಎಂದು ಕರೆಯಬೇಕು ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ