Breaking News

ಬಂಡೆ’ಯನ್ನು ಆರ್.ಆರ್.ನಗರದ ಜನ ಛಿದ್ರಗೊಳಿಸಿದ್ದಾರೆ : ಕಟೀಲ್

Spread the love

ಬೆಂಗಳೂರು,ನ.10- ಜನತೆಯ ಮುಂದೆ ಅಹಂಕಾರ, ದರ್ಪ ನಡೆಯುವುದಿಲ್ಲ ಎಂಬುದಕ್ಕೆ ರಾಜರಾಜೇಶ್ವರಿನಗರ ಮತ್ತು ಶಿರಾ ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಪ್ರತಿಪಕ್ಷದ ವಿಧಾನಸಭೆ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ತಕ್ಕ ಪಾಠ ಕಲಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ತಿರುಗೇಟು ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಪ್ರಚಾರದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಯಾವ ರೀತಿ ಮಾತನಾಡಿದರು ಎಂಬುದು ಎಲ್ಲರಿಗೂ ಗೊತ್ತಿದೆ. ಅವರ ದರ್ಪ ಮತ್ತು ಅಹಂಕಾರಕ್ಕೆ ಜನತೆ ತಕ್ಕ ಪಾಠ ಕಲಿಸಿದ್ದಾರೆ ಎಂದರು. ಹುಲಿಯ ಈಗ ಕಾಡಿಗೆ ಹೋದರೆ, ಬಂಡೆಯನ್ನು ಜನ ಛಿದ್ರ ಮಾಡಿದ್ದಾರೆ. ಜನತೆಯ ಮುಂದೆ ನಮ್ಮ ಆಟಗಳು ನಡೆಯುವುದಿಲ್ಲ ಎಂಬುದಕ್ಕೆ ಈ ಉಪಚುನಾವಣೆಯ ಫಲಿತಾಂಶ ಎಲ್ಲರಿಗೂ ಎಚ್ಚರಿಕೆಯ ಗಂಟೆ ಎಂದು ಹೇಳಿದರು.


Spread the love

About Laxminews 24x7

Check Also

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮಾರ್ಚ್ 8. ರಂದು ವಿದ್ಯುತ್ ವ್ಯತ್ಯಯ

Spread the loveಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ. ಸುವರ್ಣ ಸೌಧ ಉಪಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ