Breaking News

ಮಾದಕ ದಂಧೆಕೋರರ ಮೇಲೆ ಪೊಲೀಸರ ಹದ್ದಿನ ಕಣ್ಣು

Spread the love

ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆಗೆ ದಿನಗಣನೆ ಆರಂಭವಾಗಿದೆ. 2024 ಅನ್ನು ಅದ್ಧೂರಿಯಾಗಿ ಸ್ವಾಗತಿಸಲು ಜನರು ಕಾಯುತ್ತಿದ್ದಾರೆ.

ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಬಹಳ ವಿಶೇಷವಾಗಿದ್ದು, ಮಾದಕ ಸರಬರಾಜು ದಂಧೆಯಲ್ಲಿ ತೊಡಗಿರುವವರ ಮೇಲೆ ನಿಗಾ ವಹಿಸುವಂತೆ ಸೂಚನೆ ನೀಡಲಾಗಿದೆ.

ಹೌದು,ಹೊಸ ವರ್ಷದ ಸಂಭ್ರಮಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮಾದಕ ಸರಬರಾಜು ದಂಧೆಯಲ್ಲಿ ತೊಡಗಿರುವವರ ಮೇಲೆ ವಿಶೇಷ ನಿಗಾ ವಹಿಸುವಂತೆ ಸಿಬ್ಬಂದಿಗೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಸೂಚನೆ ನೀಡಿದ್ದಾರೆ. ಪಾರ್ಟಿ ಪ್ರಿಯರ ನೆಚ್ಚಿನ ಸ್ಥಳಗಳಿಗೆ ಮಾದಕ ಪದಾರ್ಥಗಳು ಹೆಚ್ಚಾಗಿ ಸರಬರಾಜು ಆಗುವುದರಿಂದ ಆ ಸ್ಥಳಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಹಾಗೂ ಇತ್ತೀಚಿಗೆ ಜೈಲಿನಿಂದ ಬಿಡುಗಡೆಯಾಗಿರುವ ಮಾದಕ ದಂಧೆಕೋರರ ಮೇಲೆ ಕಣ್ಣಿಡಲು ಸೂಚಿಸಲಾಗಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ