Breaking News

ಸಂಸತ್ ದಾಳಿ ಹೊಣೆ ಹೊತ್ತು ಪ್ರಧಾನಿ ರಾಜೀನಾಮೆ ನೀಡಲು ಕಾಂಗ್ರೆಸ್ ಆಗ್ರಹ

Spread the love

ಬೆಂಗಳೂರು:ಸಂಸತ್ ಅಧಿವೇಶನ ನಡೆಯುವ ಸಂದರ್ಭದಲ್ಲಿಯೇ ನಡೆದಿರುವ ದಾಳಿಯ ಹೊಣೆಯನ್ನು ಪ್ರಧಾನಮಂತ್ರಿ, ಗೃಹ ಸಚಿವ ಮತ್ತು ಸ್ಪೀಕರ್ ಅವರು ಹೊರಬೇಕು ಮತ್ತು ಕೂಡಲೆ ಅವರ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಸಂಸತ್ ಭವನದ ಮೇಲೆ ದಾಳಿ ನಡೆದು 22 ವರ್ಷ ತುಂಬಿದ ಸಂದರ್ಭದಲ್ಲಿಯೇ ಈ ದಾಳಿ ಆಗಿರುವುದು ಆತಂಕಕಾರಿ ಸಂಗತಿ ಎಂದರು.

ಸಂಸತ್ ಪ್ರಜಾಪ್ರಭುತ್ವದ ದೇಗುಲವಿದ್ದಂತೆ. ಅಲ್ಲಿಗೆ ಭದ್ರತೆ ಕೊಡಲಾಗದವರು ಇನ್ನು ದೇಶಕ್ಕೆ ಯಾವ ರೀತಿ ಭದ್ರತೆ ನೀಡಲು ಸಾಧ್ಯ? ಐದಾರು ಹಂತದಲ್ಲಿ ಭದ್ರತಾ ವ್ಯವಸ್ಥೆಯನ್ನು ದಾಟಿ ಸಂಸತ್ ಭವನದೊಳಗೆ ಬಂದು ಅಧಿವೇಶನದಲ್ಲಿ ದಾಳಿ ಮಾಡುತ್ತಾರೆ ಎಂದರೆ ದೊಡ್ಡ ಪ್ರಮಾಣದಲ್ಲಿ ಭದ್ರತಾ ಲೋಪ ಆಗಿದೆ. ಇದರ ಹೊಣೆಯನ್ನು ಪ್ರಧಾನಿಯೇ ಹೊರಬೇಕು ತಾನೆ? ಎಂದು ಕೇಳಿದರು.
ಸಣ್ಣ ಕಾರಣಕ್ಕಾಗಿಯೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿರುವ ಪ್ರಕರಣಗಳು ನಮ್ಮ ಮುಂದಿವೆ. ಇಷ್ಟು ದೊಡ್ಡ ವ್ಯವಸ್ಥೆಯ ಲೋಪವಾಗಿರುವ ಸಂದರ್ಭದಲ್ಲಿ ಅದನ್ನು ಹೇಗೆ ಸಹಿಸಿಕೊಳ್ಳಲು ಸಾಧ್ಯ? ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ