Breaking News

ಪತ್ನಿಯ ಕೊಲೆಗೈದು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ ಪತಿ ಬಂಧನ

Spread the love

ರಾಯಚೂರು: ಪತ್ನಿಯ ಕೊಲೆಗೈದು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ್ದ ಪತಿಯನ್ನು ಬಂಧಿಸಿರುವುದಾಗಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ನಿಖಿಲ್.ಬಿ.ತಿಳಿಸಿದರು.

ಸೋನಿ ಕೊಲೆಯಾದ ಮಹಿಳೆ. ಅವಿನಾಶ್ ಹಂತಕ.

ಎಸ್​ಪಿ​ ನಿಖಿಲ್.ಬಿ. ಮಾತನಾಡಿ, “ರಾಯಚೂರಿನ ಪಶ್ಚಿಮ​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಡಿ.13ರಂದು ಕೊಲೆ ನಡೆದಿತ್ತು. ಅವಿನಾಶ್​ ಎಂಬಾತ ತನ್ನ ಪತ್ನಿ ಸೋನಿ ಅವರನ್ನು ವೇಲ್‌ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದ. ಇವರು ಒಂದು ವರ್ಷದ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಒಂದು ತಿಂಗಳ ಮಗು ಇದೆ. ಮಗು ಜನಿಸಿದ ಬಳಿಕ ಸೋನಿ ನೋವಿನಿಂದ ಬಳಲುತ್ತಿದ್ದರು. ವೈದ್ಯಕೀಯ ವೆಚ್ಚ ಹೆಚ್ಚಾಗಿದ್ದರಿಂದ ಪತ್ನಿಯ ಮೇಲೆ ಕೊಪಗೊಂಡು ಆಕೆಯನ್ನು ಹತ್ಯೆ ಮಾಡಿದ್ದಾನೆ. ಆರೋಪಿ ಮೊದಲು, ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಿಂಬಿಸಲು ಯತ್ನಿಸಿದ್ದ. ನಂತರ ತನಿಖೆಯಲ್ಲಿ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ” ಎಂದರು.

“ಯಾವಾಗಲೂ ಅಳುತ್ತಿದ್ದುದರಿಂದ ಮಗುವನ್ನು ನಿನಗೆ ನೋಡಿಕೊಳ್ಳಲು ಬರುವುದಿಲ್ಲ ಎಂದು ತನ್ನ ಪತ್ನಿಯೊಂದಿಗೆ ಆರೋಪಿ ಜಗಳವಾಡುತ್ತಿದ್ದ. ಮೂಲತಃ ಉತ್ತರ ಪ್ರದೇಶದ ಹತ್ರಾಸ್​ನವರಾಗಿದ್ದು, ಪ್ರೀತಿಸಿ ಮದುವೆಯಾಗಿದ್ದರು. ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಮಗುವನ್ನು ಸೌಹಾರ್ದ ಕೇಂದ್ರದಲ್ಲಿ ಇರಿಸಲಾಗಿದೆ” ಎಂದು ಅವರು ತಿಳಿಸಿದರು.


Spread the love

About Laxminews 24x7

Check Also

ಆಟೊ ಬುಕ್ ಮಾಡಿ ಬಳಿಕ ರದ್ದು ಮಾಡಿದಕ್ಕೆ ಯುವತಿ ಹಿಂಬಾಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಚಾಲಕ: ಬಂಧನ

Spread the love ಬೆಂಗಳೂರು: ಆ್ಯಪ್​ನಲ್ಲಿ ಆಟೋ ಬುಕ್ ಮಾಡಿ ಬಳಿಕ ರದ್ದು ಮಾಡಿದ್ದಕ್ಕೆ ಅಸಮಾಧಾನಗೊಂಡು ಯುವತಿಯನ್ನ ಹಿಂಬಾಲಿಸಿ ಅವಾಚ್ಯ ಶಬ್ಧಗಳಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ