Breaking News

ಕರ್ನಾಟಕ ವಿಧಾನಸಭೆಯ ಎಸ್ಟಿಮೇಟ್ ಕಮಿಟಿ (ಅಂದಾಜುಗಳ ಸಮಿತಿ) ಅಧ್ಯಕ್ಷರನ್ನಾಗಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರನ್ನು ನೇಮಕಮಾಡಲಾಗಿದೆ.

Spread the love

ಬೆಂಗಳೂರು  – ಕರ್ನಾಟಕ ವಿಧಾನಸಭೆಯ ಎಸ್ಟಿಮೇಟ್ ಕಮಿಟಿ (ಅಂದಾಜುಗಳ ಸಮಿತಿ) ಅಧ್ಯಕ್ಷರನ್ನಾಗಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರನ್ನು ನೇಮಕಮಾಡಲಾಗಿದೆ.

ಒಟ್ಟೂ 17 ಜನರ ಸಮಿತಿಯನ್ನು ನೇಮಕ ಮಾಡಿ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ್ದಾರೆ.

ಎಸ್.ಎ.ರವೀಂದ್ರನಾಥ, ದುರ್ಯೋಧನ ಐಹೊಳೆ, ವೀರಣ್ಣ ಚರಂತಿಮಠ, ಶಿವರಾಜ ಪಾಟೀಲ, ಹಾಲಪ್ಪ ಆಚಾರ, ಅಮೃತ ದೇಸಾಯಿ, ಮಹಾಂತೇಶ ದೊಡ್ಡಗೌಡರ್, ಸುನೀಲ ನಾಯ್ಕ, ಅಮರೇಗೌಡ ಬಯ್ಯಾಪುರ, ಶರಣ ಬಸಪ್ಪ ದರ್ಶನಾಪುರ, ಮಹಾಂತೇಶ ಕೌಜಲಗಿ, ಸತೀಶ್ ಜಾರಕಿಹೊಳಿ, ಯಶವಂತರಾಯಗೌಡ ಪಾಟೀಲ, ಡಿ.ಸಿ.ತಮ್ಮಣ್ಣ, ಶಿವಲಿಂಗೇಗೌಡ, ಸಿ.ಎನ್.ಬಾಲಕೃಷ್ಣ ಸಮಿತಿಯ ಸದಸ್ಯರಾಗಿದ್ದು, ಅಭಯ ಪಾಟೀಲ ಅಧ್ಯಕ್ಷರಾಗಿರುತ್ತಾರೆ.

ಈ ಹಿಂದೆ ಎಸ್ಟಿಮೇಟ್ ಸಮಿತಿ ಸದಸ್ಯರಾಗಿ ಬೆಳಗಾವಿ ಜಿಲ್ಲೆಯ ಹಲವಾರು ಅಕ್ರಮಗಳನ್ನು ಅಭಯ ಪಾಟೀಲ ಬಯಲಿಗೆಳೆದಿದ್ದರು. ಅನೇಕ ಎಂಜಿನಿಯರ್ ಗಳು ಅಮಾನತುಗೊಂಡಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ