Breaking News

ಸ್ಮೃತಿ ಇರಾನಿ ಭೇಟಿಯಾದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Spread the love

ನವದೆಹಲಿ/ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಿ, ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆ ಕುರಿತಂತೆ ಸುದೀರ್ಘವಾಗಿ ಮಾತುಕತೆ ನಡೆಸಿದರು.

 

ಕೇಂದ್ರ ಪುರಸ್ಕೃತ ಯೋಜನೆಗಳಾದ ಸಖಿ ಒನ್ ಸ್ಟಾಪ್ ಸೆಂಟರ್, ಸಖಿ ನಿವಾಸ್, ಶಕ್ತಿ ಸದನ್, ಉಜ್ವಲ್ ಹಾಗೂ ಸ್ವಾಧಾರ ಗೃಹ ಯೋಜನೆಗಳ ಅನುದಾನ ಬಿಡುಗಡೆಗೊಳಿಸುವಂತೆ ವಿನಂತಿಸಿದರು. ಐಸಿಡಿಎಸ್ ಯೋಜನೆಯಡಿ ಅಂಗನವಾಡಿಗಳಿಗೆ ನೀಡಬೇಕಿರುವ ಅಕ್ಕಿ ಮತ್ತು ಗೋದಿ ಕಳೆದ ಒಂದು ವರ್ಷದಿಂದ ಬಿಡುಗಡೆಯಾಗದೆ ಬಾಕಿ ಉಳಿದಿರುವ ಕುರಿತು ಸಹ ಕೇಂದ್ರ ಸಚಿವರ ಗಮನ ಸೆಳೆದ ಲಕ್ಷ್ಮಿ ಹೆಬ್ಬಾಳ್ಕರ್​​, ಕೂಡಲೇ ಬಿಡುಗಡೆಗೊಳಿಸಲು ಕ್ರಮ ತೆಗೆದುಕೊಳ್ಳುವಂತೆ ಕೋರಿದರು.

ಜೊತೆಗೆ, ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ 51 ತಾಲೂಕುಗಳಿಗೆ ಶಿಶು ಅಭಿವೃದ್ಧಿ ಕಚೇರಿ ಮಂಜೂರು ಮಾಡುವಂತೆ ಮತ್ತು ಸಿಬ್ಬಂದಿ ನೀಡುವಂತೆ ಹಾಗೂ ಸಕ್ಷಮ್ ಯೋಜನೆಯಡಿಯ ಅಂಗನವಾಡಿ ಕೇಂದ್ರಗಳನ್ನು ಸ್ಮಾರ್ಟ ಕ್ಲಾಸ್ ರೂಂ ಆಗಿ ಪರಿವರ್ತಿಸಲು ಸಹ ಲಕ್ಷ್ಮಿ ಹೆಬ್ಬಾಳಕರ್ ಸ್ಮೃತಿ ಇರಾನಿ ಬಳಿ ಮನವಿ ಮಾಡಿದರು.

ಲಕ್ಷ್ಮಿ ಹೆಬ್ಬಾಳಕರ್ ಅವರ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸ್ಮೃತಿ ಇರಾನಿ, ತಕ್ಷಣ ಎಲ್ಲವುಗಳಿಗೆ ಸಂಬಂಧಿಸಿದಂತೆ ಸಮಗ್ರ ವರದಿ ನೀಡುವಂತೆ ಮತ್ತು ಅನುದಾನ ಬಿಡುಗಡೆಗೆ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು. ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಜೆ.ಸಿ.ಪ್ರಕಾಶ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ ಈ ಸಂದರ್ಭದಲ್ಲಿ ಇದ್ದರು.

 


Spread the love

About Laxminews 24x7

Check Also

ಹುಬ್ಬಳ್ಳಿ ಗರ್ಭಿಣಿ ಕೊಲೆ ಪ್ರಕರಣ: ಕರ್ತವ್ಯಲೋಪದಡಿ ಇಬ್ಬರು ಪೊಲೀಸ್​ ಸಿಬ್ಬಂದಿ ಅಮಾನತು, ಸಂತ್ರಸ್ತ ಕುಟುಂಬ ಭೇಟಿ ಮಾಡಿದ ಡಿಸಿ, ಶಾಸಕರು

Spread the loveಹುಬ್ಬಳ್ಳಿ: ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಅನ್ಯಜಾತಿ ಯುವಕನ ಮದುವೆಯಾಗಿದ್ದಕ್ಕೆ ಗರ್ಭಿಣಿ ಮೇಲೆ ಆಕೆಯ ತಂದೆ, ಕುಟುಂಬಸ್ಥರು ಹಲ್ಲೆಗೈದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ