Breaking News

ಮೈಸೂರಲ್ಲಿ ಕೋವಿಡ್​ ಆತಂಕ

Spread the love

ಮೈಸೂರು: ಕೇರಳದಲ್ಲಿ ಕೋವಿಡ್ ರೂಪಾಂತರಿ ಜೆಎನ್.1 ಪ್ರಕರಣ ವರದಿಯಾದ ಹಿನ್ನೆಲೆ ಹೆಚ್​ಡಿ ಕೋಟೆ ತಾಲೂಕಿನ ಬಾವಲಿ ಚೆಕ್​ ಪೋಸ್ಟ್​ಗೆ ತಾಲೂಕು ಆರೋಗ್ಯಾಧಿಕಾರಿ ಡಾ ರವಿಕುಮಾರ್.ಟಿ.

ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆರೋಗ್ಯಾಧಿಕಾರಿ ಡಾ ರವಿಕುಮಾರ್​ ಮಾತನಾಡಿ, “ಕೇರಳದ ವಯನಾಡ್ ಜಿಲ್ಲೆಯಲ್ಲಿ ಕೋವಿಡ್​ ಪ್ರಕರಣಗಳು ಕಂಡುಬಂದ ಹಿನ್ನೆಲೆ ಇಂದು ಹೆಚ್​ಡಿ ಕೋಟೆಯ ಬಾವಲಿ ಚೆಕ್​ ಪೋಸ್ಟ್​ಗೆ ಆಗಮಿಸಿ ಪರಿಶೀಲನೆ ನಡೆಸಿದ್ದೇನೆ. ನಾಳೆಯಿಂದ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆ ವರೆಗೆ ಹಾಗೂ 2 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಸ್ಕ್ರೀನಿಂಗ್​ ಮಾಡಲು ಸಿಬ್ಬಂದಿ ನಿಯೋಜಿಸಲಾಗುತ್ತದೆ. ಇಲ್ಲಿಂದ ಕೇರಳಕ್ಕೆ ಕೆಲಸಕ್ಕೆ ತೆರಳುವ ಕೂಲಿ ಕಾರ್ಮಿಕರ ಮೇಲೆ ನಿಗಾ ವಹಿಸಿ, ಅವರಲ್ಲಿ ಯಾವುದೇ ಕೋವಿಡ್​ ಲಕ್ಷಣಗಳು ಕಂಡು ಬಂದರೆ ಪರೀಕ್ಷೆ ಮಾಡುವಂತೆ ಸಿಬ್ಬಂದಿಗೆ ಸೂಚನೆ ನೀಡಿದ್ದೇನೆ” ಎಂದರು.

“ಕೇರಳದ ಗಡಿ ಭಾಗದಲ್ಲಿರುವ ಗ್ರಾಮಗಳಲ್ಲಿನ ಜನರಿಗೆ ಕರಪತ್ರದ ಮೂಲಕ ಕೋವಿಡ್​ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದ್ದೇನೆ. ಅರಣ್ಯ ಮತ್ತು ಪೊಲೀಸ್​ ಇಲಾಖೆಯ ಸಿಬ್ಬಂದಿ ನಮ್ಮೊಂದಿಗೆ ಕೆಲಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಮತ್ತು ಮೇಲಧಿಕಾರಿಗಳ ಸೂಚನೆಯಂತೆ ಕೆಲಸವನ್ನು ನಿರ್ವಹಿಸುತ್ತೇವೆ” ಎಂದು ತಿಳಿಸಿದರು.

ಜೆಎನ್.1 ತಳಿ ವೈರಸ್ ದುರ್ಬಲ – ಆಂಜಿನಪ್ಪ(ದೊಡ್ಡಬಳ್ಳಾಪುರ): ಮತ್ತೊಂದೆಡೆ, ಕೋವಿಡ್​ ರೂಪಾಂತರಿ ಜೆಎನ್.1 ವೈರಸ್ ದುರ್ಬಲವಾದದ್ದು, ಸಂಕ್ರಾಂತಿ ಬಳಿಕ ತಾನಾಗಿಯೇ ಮಾಯವಾಗಲಿದೆ. ಹಾಗಾಗಿ ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಡಾ. ಆಂಜಿನಪ್ಪ ಹೇಳಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ಮಾತನಾಡಿದ ಅವರು, ರೂಪಾಂತರಿ ವೈರಸ್ ಬಗ್ಗೆ ಜನ ಆತಂಕಪಡುವ ಅಗತ್ಯವಿಲ್ಲ. ಆದರೆ, 60 ವರ್ಷ ಮೇಲ್ಪಟ್ಟವರು ಮತ್ತು 3 ರಿಂದ 13 ವರ್ಷದ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಹಿಂದಿನ ಅನುಭವದ ಪ್ರಕಾರ ಜನರು ಗುಂಪು ಗುಂಪಾಗಿ ಸೇರಬಾರದು. ಸರ್ಕಾರದ ಗೈಡ್​​ಲೈನ್​ ಪ್ರಕಾರ 60 ವರ್ಷ ಮೇಲ್ಪಟ್ಟವರು ಮಾಸ್ಕ್ ಧರಿಸಬೇಕು ಎಂದರು.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ