Home / ರಾಜಕೀಯ / ಕನ್ನಡ ಧ್ವಜ ಹಾಕಿದ್ದಕ್ಕೆ ದುಷ್ಕರ್ಮಿಗಳು ಯುವಕರಿಗೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಕನ್ನಡ ಧ್ವಜ ಹಾಕಿದ್ದಕ್ಕೆ ದುಷ್ಕರ್ಮಿಗಳು ಯುವಕರಿಗೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

Spread the love

ಚಿಕ್ಕೋಡಿ(ಬೆಳಗಾವಿ): ಕನ್ನಡ ಧ್ವಜ ಅಳವಡಿಸಿದ್ದಕ್ಕೆ ಇಬ್ಬರು ಯುವಕರಿಗೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ನಡೆದಿದೆ.

ಹಲ್ಲೆ ನಡೆಸಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಂಕಲಿ ಗ್ರಾಮದ ಬಸವರಾಜ ಪಾಟೀಲ, ಹಾಗೂ ಶುಭಂ ಕಿವುಂಡಾ ಎಂಬವರ ಮೇಲೆ ಹಲ್ಲೆಯಾಗಿದೆ. ಅಂಗತ ಕರಮೆ, ಅನಿಕೇತ್ ಕರಮೆ, ಶಾಹು ಮಗದುಮ್ ಸೇರಿದಂತೆ ಹಲವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಅಂಕಲಿ ಗ್ರಾಮದಲ್ಲಿ ಕೆಲವು ಯುವಕರು ಶಿವಾಜಿ ಪುತ್ಥಳಿ ಬಳಿ ಕನ್ನಡ ಧ್ವಜ ಅಳವಡಿಸಿದ್ದರು ಎಂದು ಹೇಳಲಾಗಿದೆ. ತೆರವು ಮಾಡುವ ವಿಚಾರಕ್ಕೆ ಜಗಳ ನಡೆದಿದ್ದು, ಯುವಕರನ್ನು ಥಳಿಸಲಾಗಿದೆ. ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಇತರೆ ನಾಲ್ವರಿಗೆ ಶೋಧ ನಡೆಯುತ್ತಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ