Breaking News

ಕೋವಿಡ್​ ನಿರ್ವಹಣೆಗೆ ಸಂಪುಟ ಉಪ ಸಮಿತಿ ರಚಿಸಲಾಗಿದೆ ಎಂದ ಸಿಎಂ

Spread the love

ಬೆಂಗಳೂರು: ಕೋವಿಡ್ ನಿರ್ವಹಣೆಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಲು ಆರೋಗ್ಯ ಇಲಾಖೆಗೆ ಸೂಚಿಸಲಾಗಿದ್ದು, ನಿರ್ವಹಣೆಗೆ ಸಂಪುಟ ಉಪ ಸಮಿತಿ ರಚಿಸಲಾಗಿದೆ.

ಔಷಧ ಖರೀದಿ, ಮಾಸ್ಕ್ ಕಡ್ಡಾಯ ಸೇರಿದಂತೆ ಎಲ್ಲ ವಿಷಯವನ್ನೂ ಸಮಿತಿ ನಿರ್ಧರಿಸಲಿದೆ. ಇಂದಿನ ಸಚಿವ ಸಂಪುಟ ಸಭೆಯಲ್ಲೇ ಉಪಸಮಿತಿ ರಚಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ ನಿಯಂತ್ರಣ ಕುರಿತು ಸಭೆ ನಡೆಸಿದ ನಂತರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಇಂದು ಆರೋಗ್ಯ, ವೈದ್ಯಕೀಯ, ಗೃಹ, ಡಿಸಿಎಂ ಸೇರಿ ಆರೋಗ್ಯ, ವೈದ್ಯಕೀಯ ಇಲಾಖೆ ಅಧಿಕಾರಿಗಳು, ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಒಳಗೊಂಡ ಸಭೆ ನಡೆಸಲಾಯಿತು. ರಾಜ್ಯದಲ್ಲಿ ಕೋವಿಡ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ಮೂವರು ನಮ್ಮ ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಇದ್ದವರು ನಿಧನರಾಗಿದ್ದಾರೆ. ಮೂವರೂ ಕೂಡ ಕೋವಿಡ್​ನಿಂದಲೇ ಮೃತಪಟ್ಟರು ಎನ್ನಲಾಗಲ್ಲ. ಇತರ ಆರೋಗ್ಯ ಸಮಸ್ಯೆಗಳೂ ಅವರಿಗಿತ್ತು. ಹೃದಯ, ಕಿಡ್ನಿ, ಶ್ವಾಸಕೋಶ ಸಮಸ್ಯೆ, ಮಧುಮೇಹ ಹಾಗು ಬಿಪಿ ಇತ್ತು. ಈಗಾಗಲೇ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ವೈದ್ಯಕೀಯ ಇಲಾಖೆ ಪ್ರತ್ಯೇಕವಾಗಿ ಸಭೆ ನಡೆಸಿದೆ. ಈ ಬಗ್ಗೆ ಸಭೆ ನಡೆಸಿ ಸಲಹೆ ಪಡೆದಿದ್ದೇನೆ ಎಂದರು.

ಯಾವುದೇ ಕಾರಣಕ್ಕೂ ಹಿಂದೆ ಮಾಡಿದ ತಪ್ಪು ಮರುಕಳಿಸಬಾರದು. ಆಕ್ಸಿಜನ್, ಬೆಡ್, ವೆಂಟಿಲೇಟರ್ ಕೊರತೆ ಇರಬಾರದು. ಇತರ ರೋಗ ಇರುವವರನ್ನೂ ಗಂಭೀರವಾಗಿ ಪರಿಗಣಿಸಿ ಚಿಕಿತ್ಸೆಗೆ ಒಳಪಡಿಸಬೇಕು. ಕೋವಿಡ್​ಗೆ ಸಂಬಂಧಿಸಿದ ಚಿಕಿತ್ಸೆಯನ್ನೂ ಮಾಡಬೇಕು. ಔಷಧಿ ಕೊರತೆ ಆಗಬಾರದು, ಯಾರಿಗಾದರೂ ಅಗತ್ಯವಿದ್ದಲ್ಲಿ ವ್ಯಾಕ್ಸಿನ್ ಹಾಕಿ, ವ್ಯಾಕ್ಸಿನ್ ತೆಗೆದುಕೊಳ್ಳದವರಿಗೆ ವ್ಯಾಕ್ಸಿನೇಷನ್ ಮಾಡಲು ಸೂಚಿಸಿದ್ದೇನೆ ಎಂದು ಹೇಳಿದರು.


Spread the love

About Laxminews 24x7

Check Also

ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು

Spread the loveಸನ್ಮಾನ್ಯ ಸತೀಶ್ ಜಾರಕಿಹೊಳಿ ಲೋಕೋಪಯೋಗಿ ಹಾಗೂ ಬೆಳಗಾವಿ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ