Breaking News

ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಸಿದ್ಧ, ಶೀಘ್ರ ಸಮಾವೇಶದಲ್ಲಿ ಘೋಷಣೆ: ಜನಾರ್ಧನ ರೆಡ್ಡಿ

Spread the love

ಲೋಕಸಭಾ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಸಿದ್ಧವಾಗಿದ್ದು, ಪಕ್ಷದ ಬೃಹತ್ ಸಮಾವೇಶ ನಡೆಸಿ ಘೋಷಣೆ ಮಾಡುತ್ತೇನೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಹಾಗೂ ಶಾಸಕ ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ. ಕೊಪ್ಪಳ: ಲೋಕಸಭಾ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಸಿದ್ಧವಾಗಿದ್ದು, ಪಕ್ಷದ ಬೃಹತ್ ಸಮಾವೇಶ ನಡೆಸಿ ಘೋಷಣೆ ಮಾಡುತ್ತೇನೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಹಾಗೂ ಶಾಸಕ ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ.
ಕೊಪ್ಪಳದ ಗಂಗಾವತಿ ತಾಲೂಕಿನ ಪಂಪಾಸರೋವರದಲ್ಲಿ ಹನುಮ ಮಾಲೆ ಧರಿಸಿ ಮಾತನಾಡಿದ ಜನಾರ್ಧನ ರೆಡ್ಡಿ, ಲೋಕಸಭಾ ಚುನಾವಣೆಗೆ (Loksabha Election) ನಾನಾಗಲಿ, ನನ್ನ ಕುಟುಂಬದವರಾಗಲಿ ಸ್ಪರ್ಧೆ ಮಾಡುವುದಿಲ್ಲ. ಹೊಸ ಅಭ್ಯರ್ಥಿಗಳು ಈಗಾಗಲೇ ರೆಡಿ ಆಗಿದ್ದಾರೆ. ಅವರ ಹೆಸರುಗಳನ್ನು ಕೊಪ್ಪಳದ ಸಮಾವೇಶದಲ್ಲಿ ಘೋಷಣೆ ಮಾಡುತ್ತೇನೆ ಎಂದು ಹೇಳಿದ್ದಾರೆ
.ಲೋಕಸಭಾ ಚುನಾವಣೆಯ ಹಿನ್ನೆಲೆ ಜನವರಿ 11 ರಂದು ಕೊಪ್ಪಳದಲ್ಲಿ 6 ಜಿಲ್ಲೆಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Spread the love

About Laxminews 24x7

Check Also

ಡಿಕೆಶಿ ಸಿಎಂ ಆಗುವ ಕನಸು ಮಾತ್ರ ಕಾಣಬೇಕು

Spread the loveಮಂಡ್ಯ : ಡಿಕೆಶಿ ಏನಿದ್ರು ಸಿಎಂ ಆಗುವ ಕನಸು ಕಾಣಬೇಕು ಅಷ್ಟೇ. ಡಿಕೆಶಿಗೆ ಕಾಂಗ್ರೆಸ್‌ನಲ್ಲಿ ಯಾರು ಬಿಟ್ಟು ಕೊಡ್ತಾರೆ? …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ