ಬೆಂಗಳೂರು, ಡಿ.23: ಕ್ರಿಸ್ಮಸ್ ಹಬ್ಬಕ್ಕೆ ರಜೆಯಿರುವ ಹಿನ್ನೆಲೆಕೆಎಸ್ಆರ್ಟಿಸಿ(KSRTC) ಹೆಚ್ಚುವರಿಯಾಗಿ 1000 ಬಸ್ ವ್ಯವಸ್ಥೆ ಮಾಡಿದೆ. ಪ್ರಯಾಣಿಕರಿಗೆ ತೊಂದರೆ ಆಗದ ಹಿನ್ನಲೆ ಡಿ. 22 ರಿಂದ ಡಿ.24 ರವರೆಗೆ ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯಕ್ಕೆ ಹೆಚ್ಚುವರಿ ಬಸ್ಗಳು ಕಾರ್ಯನಿರ್ವಹಿಸಲಿವೆ. ಅದರಂತೆ ಡಿ.25 ರಂದು ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ಬಸ್ಗಳು ಕಾರ್ಯಾಚರಣೆಗೊಳ್ಳಲಿದೆ.
ವಿವಿಧ ಸ್ಥಳಗಳಿಗೆ ಬಸ್ ವ್ಯವಸ್ಥೆ; ಪ್ರಯಾಣಿಕರು ಮೊದಲೇ ಸೀಟ್ ರಿಸರ್ವ್ ಮಾಡಬಹುದು
ರಾಜ್ಯದ ಧರ್ಮಸ್ಥಳ, ಕುಕ್ಕೆ, ಶಿವಮೊಗ್ಗ, ಹಾಸನ, ಗೋಕರ್ಣ, ಶಿರಸಿ ಸೇರಿದಂತೆ ಹಲವು ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ಬಸ್ಗಳು ಹೊರಡಲಿದ್ದು, ಅದರಂತೆ ತಮಿಳುನಾಡು, ಕೇರಳ ರಾಜ್ಯದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಬಸ್ಗಳು ಸಂಚರಿಸಲಿವೆ. ಪ್ರಯಾಣಿಕರು ಮೊದಲೇ ಸೀಟ್ ರಿಸರ್ವ್ ಮಾಡಬಹುದಾಗಿದೆ. ಇ-ಟಿಕೆಟ್ ಸಹ ವೆಬ್ ಸೈಟ್ ಮೂಲಕ ಪಡೆಯಬಹುದು. ಇನ್ನು ನಾಲ್ಕು ಹಾಗೂ ನಾಲ್ಕಕ್ಕಿಂತ ಹೆಚ್ಚಿನ ಟಿಕೆಟ್ ಕಾಯ್ದಿರಿಸಿದರೆ, 5 % ರಿಯಾಯಿತಿ ನೀಡಿದರೆ, ಹೋಗುವ ಹಾಗೂ ಬರುವ ಟಿಕೆಟ್ ಕಾಯ್ದಿರಿಸಿದರೆ ಬರೊಬ್ಬರಿ 10% ರಿಯಾಯಿತಿ ಕೊಡುತ್ತಿದೆ ಕೆಎಸ್ಆರ್ಟಿಸಿ.
Laxmi News 24×7